Homeಮುಖಪುಟದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ.

- Advertisement -
- Advertisement -

ಯಾರು ಈ ದೇಶವನ್ನು ಕಟ್ಟುತ್ತಾರೋ, ಒಗ್ಗೂಡಿಸುತ್ತಾರೊ ಅವರು ದೇಶಪ್ರೇಮಿಗಳು. ಹಿಂದೂ – ಮುಸ್ಲಿಂ, ಹಿಂದೂ – ಸಿಖ್ಖರ ನಡುವೆ ಜಗಳ ತರುವವರು ದೇಶದ್ರೋಹಿಗಳು ಎಂದು ಚಿಂತಕ, ಮಾನವ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ನಡೆದ ಸಹಬಾಳ್ವೆ ಸಮಾವೇಶದಲ್ಲಿ ಮಾತನಾಡಿದ ಅವರು, “ಕೆಲವರು ಇಲ್ಲಿಯೇ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ನಾವು ಇಲ್ಲಿಯೇ ಸಾಮರಸ್ಯ ಮೂಡಿಸುತ್ತೇವೆ, ಸ್ನೇಹ ಬೆಳೆಸುತ್ತೇವೆ ಎನ್ನುತ್ತೇವೆ. ಅವರು ಒಡೆಯುತ್ತಾರೆ, ನಾವು ಕೂಡಿಸುತ್ತೇವೆ. ಅದು ದೆಹಲಿ‌ ತನಕ‌ ಕೇಳಿಸಲಿ. ಇದು ನನ್ನೊಬ್ಬನ ಹೃದಯದ ಮಾತಲ್ಲ, ನಿಮ್ಮೆಲ್ಲರ ಹೃದಯದ ಮಾತಾಗಿದೆ” ಎಂದರು.

ಈ ಸಮಾವೇಶಕ್ಕೆ ಉಡುಪಿಯನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದಗಳು. ಏಕೆಂದರೆ ಇತ್ತೀಚಿನ ದ್ವೇಷದ ಅಲೆಗೆ ಉಡುಪಿಯನ್ನು ಆಯ್ದುಕೊಳ್ಳಲಾಗಿತ್ತು. ಉಡುಪಿಯ ಹೆಸರು ದೇಶದ ಎಲ್ಲಾ ಟಿವಿ ಚಾನೆಲ್‌ಗಳಲ್ಲಿ ಹರಡಿತು. ಕರಾವಳಿ ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಎಲ್ಲವೂ ಬೆಳೆಯುತ್ತದೆ, ಇದು ಫಲವತ್ತಾದ ಸ್ಥಳವಾಗಿದೆ. ಹೀಗಾಗಿ ಇಲ್ಲೂ ಒಂದಿಷ್ಟು ದ್ವೇಷ ಬಿತ್ತೋಣ ಎಂದುಕೊಂಡಿದ್ದಾರೆ. ಆದರೆ ಅದರ ಫಸಲು ಬೆಳೆಯಲು ನಾವು ಬಿಡುವುದಿಲ್ಲ ಎಂದರು.

ಅವರು ಎರಡು ದರ್ಜೆಯ ಜನರನ್ನಾಗಿ ವಿಂಗಡಿಸಲು ಯತ್ನಿಸುತ್ತಾರೆ. ಪ್ರಥಮೆ, ಎರಡನೇ ದರ್ಜೆಯ ನಾಗರಿಕರನ್ನಾಗಿ ವಿಭಜಿಸಲು ಅವರು ಯತ್ನಿಸುತ್ತಾರೆ. ಮನೆಯ ಮಾಲಿಕ ಮತ್ತು ಮನೆಯ ಬಾಡಿಗೆದಾರ ಎಂಬ ವರ್ಗಗಳನ್ನು ಸೃಷ್ಟಿಸುತ್ತಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಕೆಲವರು ಹೇಳುತ್ತಾರೆ. ಹಿಂದಿ ಇನ್ನೂರು ವರ್ಷ ಹಳೆಯದು. ಆದರೆ ಕನ್ನಡ ಎರಡೂವರೆ ಸಾವಿರ ವರ್ಷ ಹಳೆಯದು. ಹೀಗಿರುವಾಗ ಹಿಂದಿ ಮಾತನಾಡುವ ಜನರು ಮನೆಯ ಮಾಲೀಕರು ಮತ್ತು ಕನ್ನಡ ಮಾತನಾಡುವ ಜನರು ಹೇಗೆ ಬಾಡಿಗೆದಾರರಾಗಲು ಸಾಧ್ಯ? ಅವರು ಒಂದು ಧರ್ಮದ ಜನರು ಮಾಲೀಕರಾಗಲು ಮತ್ತು ಉಳಿದ ಧರ್ಮದ ಜನರು ಬಾಡಿಗೆದಾರರಾಗುವಂತೆ ಮಾಡುತ್ತಿದ್ದಾರೆ. ನಾವು ಉಡುಪಿಯಲ್ಲಿ ಘೋಷಿಸುತ್ತೇವೆ. ಯಾರ್ಯಾರ ಪೂರ್ವಿಕರ ರಕ್ತ ಇಲ್ಲಿದೆಯೋ ಅವರೆಲ್ಲರೂ ಈ ದೇಶದ ಮಾಲೀಕರು. ನಾವು ಯಾರ ಗುಲಾಮರಲ್ಲ ಎಂದು ಯಾದವ್ ತಿಳಿಸಿದರು.

ಸೆಕ್ಯುಲರಿಸಂ ಎಂಬ ಪದ ಇಂದಿರಾಗಾಂಧಿ ಸಂವಿಧಾನದಲ್ಲಿ ಸೇರಿಸುವ ಮೊದಲು ಇರಲಿಲ್ಲ ಎಂದು ಅವರು ಹೇಳುತ್ತಾರೆ. ಸಮಾನತೆಯ ಹಕ್ಕು, ಸಾಂಸ್ಕೃತಿಕ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್‍ಯದ ಹಕ್ಕು 1950 ರ ಸಂವಿಧಾನದಲ್ಲಿಯೇ ಇತ್ತು. ಅದೇ ಸೆಕ್ಯುಲರಿಸಂ. ಸಂವಿಧಾನದ ಕರಡು ರಚನೆ ಸಂದರ್ಭದಲ್ಲಿಯೇ ಈ ಆಶಯಗಳನ್ನು ಸೇರಿಸಲಾಗಿತ್ತು, ಅವು ಸ್ವಾತಂತ್ರ್‍ಯ ಹೋರಾಟದ ಫಲಗಳು ಎಂದು ಯಾದವ್ ಹೇಳಿದರು.

ಗೌತಮ ಬುದ್ಧ ಮೈತ್ರಿ ಬಗ್ಗೆ ಹೇಳುತ್ತಾರೆ. ಅಶೋಕ ಮತ್ತು ಅಕ್ಬರ್ ಕೂಡ ಮೈತ್ರಿ ಬಗ್ಗೆ ಮಾತನಾಡುತ್ತಾರೆ. ಇದು ಭಾರತದ ಪರಂಪರೆ. ಸೆಕ್ಯುಲರಿಸಂ ಬ್ರಿಟಿಷರ ಕೊಡುಗೆ ಅಲ್ಲ. ಐದು ಸಾವಿರ ವರ್ಷಗಳಿಂದ ಈ ದೇಶ ಹೀಗೆಯೇ ನಡೆಯುತ್ತಿದೆ. ಸಿಂಹಾಸನದ ಮೇಲೆ ಕುಳಿತಿರುವವರು ತಾವೇ ದೇವರು ಎಂದು ನಂಬಿದ್ದಾರೆ. ಅವರ ಮುಂಚೆಯೂ ಈ ದೇಶ ಇತ್ತು, ಅವರ ನಂತರವೂ ಈ ದೇಶ ಇರುತ್ತದೆ. ಎಲ್ಲರನ್ನೂ ಗೌರವಿಸುವ, ಒಟ್ಟಿಗೆ ಕರೆದೊಯ್ಯುವುದು ಈ ದೇಶದ ಧರ್ಮ ಎಂಬುದನ್ನು ಅವರು ಮರೆಯಬಾರದು ಎಂದರು.

ಇಂದು ದೇಶದಲ್ಲಿ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಕೇವಲ ಕಟ್ಟಡಗಳ ಮೇಲೆ ಅಲ್ಲ ಹಿಂದೂಸ್ಥಾನದ ಮೇಲೆ, ಸಂವಿಧಾನದ ಮೇಲೆ ಬುಲ್ಡೋಜರ್‌ ಚಲಾಯಿಸಲಾಗುತ್ತಿದೆ. ಮೀಡಿಯಾ ಪ್ರಾಮಾಣಿಕವಾಗಿದ್ದರೆ ಈ ಉಡುಪಿ ಸಮಾವೇಶ ನಾಳೆ ಮುಖಪುಟದ ಹೆಡ್ಲೈನ್ ಆಗುತ್ತದೆ. ನಾನು ಪತ್ರಕರ್ತರನ್ನು ದೂರುವುದಿಲ್ಲ. ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರ ಬಳಿ ಹಣ ಮತ್ತು ಅಧಿಕಾರವಿದೆಯೇ ಅವರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದರು.

ನಮ್ಮ ಕೈಯಲ್ಲಿ ಈ ದೇಶದ ಮಣ್ಣಿದೆ. ಸೂಫಿ ಪರಂಪರೆಯಿದೆ. ಬುದ್ದ, ಬಸವಣ್ಣ, ಭಗತ್ ಸಿಂಗ್, ಮೌಲಾನ ಆಜಾದ್ ಇದ್ದಾರೆ. ಅಂಬೇಡ್ಕರ್‌ರವರ ಸಂವಿಧಾನವಿದೆ. ಪ್ರಶ್ನೆ ಇರುವುದು ನಾವು ಗೆದಿಲ್ಲ ಎನ್ನುವುದಲ್ಲ, ಹೇಗೆ ಮತ್ತು ಯಾವಾಗ ಗೆಲ್ಲುತ್ತೇವೆ ಎನ್ನುವುದಾಗಿದೆ. ದೊಡ್ಡ ಪರಂಪರೆ ನಮಗಿರುವುದರಿಂದ ಹೋರಾಡುತ್ತೇವೆ ಮತ್ತು ನಾವು ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ; ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಮ್ಯೂನಿಸ್ಟ್ ಉಗ್ರರು ಯಾವಾಗಲೂ ಮಾಡಿರುವ ದಾಖಲೆ ದೇಶ ಒಡೆಯುವ ಕೆಲಸವೇ ಅಲ್ಲವೇ ಪ್ರಪಂಚದ ಇತಿಹಾಸದಲ್ಲಿ

  2. ದ್ವೇಷದ ಹೋರಾಟ ಹೇಗೆ ಇಡೀ ಪ್ರಪಂಚಕ್ಕೆ ಸುದ್ದಿ ಮಾದ್ಯಮಗಳಲ್ಲಿ ಬಿತ್ತರವಾಯಿತೋ ಹಾಗೆಯೆ ಸಾಮರಸ್ಯದ ಹೋರಾಟವೂ ಪ್ರಪಂಚದೆಲ್ಲೆಡೆ ಪ್ರಸಾರವಾಗಲಿ ಎಂದು ಆಶಿಸುತ್ತೇನೆ. ಪ್ರಜಾಪ್ರಭಹತ್ವ=ಜಾತ್ಯಾತೀತತೆ, ಇದಕ್ಕೆ ಮತ್ತೊಂದು ವಿವರಣೆಯ ಅವಶ್ಯಕತೆ ಇಲ್ಲ. ಪ್ರಜೆ ಎಂದರೆ ಜಾತಿ, ಧರ್ಮ, ಭಾಷೆ, ಪ್ರದೇಶ, ಇತರೆ ಎಲ್ಲವನ್ನೂ ಮೀರಿದ ಭಾರತೀಯ. ಆನಂತರ ಅವೆಲ್ಲವನ್ನೂ ಪರಿಗಣಿಸ ಬಹುದು. ಈ ವಿಚಾರದಲ್ಲಿ ವಿದ್ಯಾವಂತರನ್ನೂ ತಪ್ಪು ದಾರಿಗೆಳೆಯಲಾಗುತ್ತಿದೆ. ಇದರಿಂದ ದೇಶ ಸರ್ವನಾಶದ ಕಡೆಗೆ ಹೆಜ್ಜೆ ಇಡುತ್ತಿದೆ. ಈ ಸಾಮರಸ್ಯದ ಸಮಾವೇಷ ಸಹಬಾಳ್ವಗೆ ಮತ್ತು ದೇಶದ ಏಳಿಗೆಯ ಆರಂಬ. ಇದನ್ನು ಆಯೋಜಿಸಿದವರೆಲ್ಲರಿಗೂ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...