Homeಮುಖಪುಟಜವಾಬ್ದಾರಿ ಪೂರೈಸದವರು ಇತರರಿಗೆ ಅವಕಾಶ ಮಾಡಿಕೊಡಿ: ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ

ಜವಾಬ್ದಾರಿ ಪೂರೈಸದವರು ಇತರರಿಗೆ ಅವಕಾಶ ಮಾಡಿಕೊಡಿ: ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ

- Advertisement -
- Advertisement -

“ಪಕ್ಷದಲ್ಲಿ ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು ಇತರರಿಗೆ ಅವಕಾಶ ಮಾಡಿಕೊಡಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಚಾಲನಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದು, “ಕಾಂಗ್ರೆಸ್‌ನಲ್ಲಿ ಕೆಲವು ಜವಾಬ್ದಾರಿಯುತ ಪದಾಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೆ, ಕೆಲವರು ತಮ್ಮ ಜವಾಬ್ದಾರಿಯನ್ನು ನಿರ್ಲಕ್ಷಿಸುತ್ತಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಸರಿಯೂ ಅಲ್ಲ, ಸ್ವೀಕಾರಾರ್ಹವೂ ಅಲ್ಲ” ಎಂದಿರುವ ಕಾಂಗ್ರೆಸ್ ಅಧ್ಯಕ್ಷರು, “ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು, ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ” ಎಂಬ ಸಂದೇಶವನ್ನು ನೀಡಿದ್ದಾರೆ.

“ಪಕ್ಷ ಮತ್ತು ದೇಶದ ಬಗ್ಗೆ ಎಲ್ಲಾ ಹಂತಗಳಲ್ಲಿ ಸಂಘಟನಾ ಹೊಣೆಗಾರಿಕೆಯನ್ನು ಹೊಂದಿರುವುದು ಕಾಂಗ್ರೆಸ್ ನಾಯಕರ ದೊಡ್ಡ ಜವಾಬ್ದಾರಿ”  ಎಂದು ಖರ್ಗೆ ಎಚ್ಚರಿಸಿದ್ದಾರೆ. “ಕಾಂಗ್ರೆಸ್ ಸಂಘಟನೆಯು ಬಲಿಷ್ಠವಾಗಿದ್ದರೆ, ಜವಾಬ್ದಾರಿಯುತವಾಗಿದ್ದರೆ, ಜನರ ನಿರೀಕ್ಷೆಗೆ ತಕ್ಕಂತೆ ನಡೆದರೆ ಮಾತ್ರ ನಾವು ಚುನಾವಣೆಯಲ್ಲಿ ಗೆದ್ದು ದೇಶದ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇತಿಹಾಸವನ್ನು ಬರೆಯುತ್ತಿದೆ. ಇದು ರಾಷ್ಟ್ರೀಯ ಚಳುವಳಿಯಾಗಿ ಮಾರ್ಪಟ್ಟಿದೆ” ಎಂದು ಖರ್ಗೆ ಬಣ್ಣಿಸಿದ್ದಾರೆ.

ಪಕ್ಷದ ನಾಯಕರನ್ನು ಉದ್ದೇಶಿಸಿ ಖರ್ಗೆಯವರು ಆಡಿರುವ ಮಾತುಗಳು ಹಲವು ನಾಯಕರಿಗೆ ಎಚ್ಚರಿಕೆಯ ಕರೆಘಂಟೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸಚಿನ್ ಪೈಲಟ್ ಕುರಿತು ಗೆಹ್ಲೋಟ್ ಅವರು ನೀಡಿರುವ ಹೇಳಿಕೆಗಳ ನಂತರ ರಾಜಸ್ಥಾನದಲ್ಲಿ ಬಿಕ್ಕಟ್ಟು ಉದ್ಭವಿಸಿತ್ತು. ಈ ಹಿನ್ನೆಲೆಯಲ್ಲಿ ಖರ್ಗೆಯವರ ಹೇಳಿಕೆಗಳು ಹೊರಬಿದ್ದಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ವ್ಯಾಪಕ ವಿವಾದದ ನಂತರವಷ್ಟೇ ಸಚಿನ್ ಮತ್ತು ಗೆಹ್ಲೋಟ್‌ ನಡುವಿನ ಸಮಸ್ಯೆಯನ್ನು ಕಾಂಗ್ರೆಸ್‌ ಇತ್ಯರ್ಥಪಡಿಸಿತ್ತು.

ಮಲ್ಲಿಕಾರ್ಜುನ ಖರ್ಗೆ ಅವರು ರಚಿಸಿರುವ ಚಾಲನಾ ಸಮಿತಿಯ ಸದಸ್ಯರ ಮೊದಲ ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...