Homeಮುಖಪುಟಜವಾಬ್ದಾರಿ ಪೂರೈಸದವರು ಇತರರಿಗೆ ಅವಕಾಶ ಮಾಡಿಕೊಡಿ: ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ

ಜವಾಬ್ದಾರಿ ಪೂರೈಸದವರು ಇತರರಿಗೆ ಅವಕಾಶ ಮಾಡಿಕೊಡಿ: ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ

- Advertisement -
- Advertisement -

“ಪಕ್ಷದಲ್ಲಿ ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು ಇತರರಿಗೆ ಅವಕಾಶ ಮಾಡಿಕೊಡಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಚಾಲನಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದು, “ಕಾಂಗ್ರೆಸ್‌ನಲ್ಲಿ ಕೆಲವು ಜವಾಬ್ದಾರಿಯುತ ಪದಾಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೆ, ಕೆಲವರು ತಮ್ಮ ಜವಾಬ್ದಾರಿಯನ್ನು ನಿರ್ಲಕ್ಷಿಸುತ್ತಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಸರಿಯೂ ಅಲ್ಲ, ಸ್ವೀಕಾರಾರ್ಹವೂ ಅಲ್ಲ” ಎಂದಿರುವ ಕಾಂಗ್ರೆಸ್ ಅಧ್ಯಕ್ಷರು, “ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು, ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ” ಎಂಬ ಸಂದೇಶವನ್ನು ನೀಡಿದ್ದಾರೆ.

“ಪಕ್ಷ ಮತ್ತು ದೇಶದ ಬಗ್ಗೆ ಎಲ್ಲಾ ಹಂತಗಳಲ್ಲಿ ಸಂಘಟನಾ ಹೊಣೆಗಾರಿಕೆಯನ್ನು ಹೊಂದಿರುವುದು ಕಾಂಗ್ರೆಸ್ ನಾಯಕರ ದೊಡ್ಡ ಜವಾಬ್ದಾರಿ”  ಎಂದು ಖರ್ಗೆ ಎಚ್ಚರಿಸಿದ್ದಾರೆ. “ಕಾಂಗ್ರೆಸ್ ಸಂಘಟನೆಯು ಬಲಿಷ್ಠವಾಗಿದ್ದರೆ, ಜವಾಬ್ದಾರಿಯುತವಾಗಿದ್ದರೆ, ಜನರ ನಿರೀಕ್ಷೆಗೆ ತಕ್ಕಂತೆ ನಡೆದರೆ ಮಾತ್ರ ನಾವು ಚುನಾವಣೆಯಲ್ಲಿ ಗೆದ್ದು ದೇಶದ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇತಿಹಾಸವನ್ನು ಬರೆಯುತ್ತಿದೆ. ಇದು ರಾಷ್ಟ್ರೀಯ ಚಳುವಳಿಯಾಗಿ ಮಾರ್ಪಟ್ಟಿದೆ” ಎಂದು ಖರ್ಗೆ ಬಣ್ಣಿಸಿದ್ದಾರೆ.

ಪಕ್ಷದ ನಾಯಕರನ್ನು ಉದ್ದೇಶಿಸಿ ಖರ್ಗೆಯವರು ಆಡಿರುವ ಮಾತುಗಳು ಹಲವು ನಾಯಕರಿಗೆ ಎಚ್ಚರಿಕೆಯ ಕರೆಘಂಟೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸಚಿನ್ ಪೈಲಟ್ ಕುರಿತು ಗೆಹ್ಲೋಟ್ ಅವರು ನೀಡಿರುವ ಹೇಳಿಕೆಗಳ ನಂತರ ರಾಜಸ್ಥಾನದಲ್ಲಿ ಬಿಕ್ಕಟ್ಟು ಉದ್ಭವಿಸಿತ್ತು. ಈ ಹಿನ್ನೆಲೆಯಲ್ಲಿ ಖರ್ಗೆಯವರ ಹೇಳಿಕೆಗಳು ಹೊರಬಿದ್ದಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ವ್ಯಾಪಕ ವಿವಾದದ ನಂತರವಷ್ಟೇ ಸಚಿನ್ ಮತ್ತು ಗೆಹ್ಲೋಟ್‌ ನಡುವಿನ ಸಮಸ್ಯೆಯನ್ನು ಕಾಂಗ್ರೆಸ್‌ ಇತ್ಯರ್ಥಪಡಿಸಿತ್ತು.

ಮಲ್ಲಿಕಾರ್ಜುನ ಖರ್ಗೆ ಅವರು ರಚಿಸಿರುವ ಚಾಲನಾ ಸಮಿತಿಯ ಸದಸ್ಯರ ಮೊದಲ ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...