Homeಕರ್ನಾಟಕಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಸೋಮವಾರ (ಅ.6) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿಎಂ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆಯವರೆಗೆ ಶೇ.63ರಷ್ಟು ಸಮೀಕ್ಷೆ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆಯವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ

ಕೊಪ್ಪಳ ಜಿಲ್ಲೆಯಿಂದ ಶೇ.97ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಿಎಂ ಮಾಹಿತಿ ನೀಡಿದರು. ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನರು ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಸಿಎಂ, ಜನತೆಗೆ ಧನ್ಯವಾದ ಹೇಳಿದರು.

ಬಲ್ಡೋಟಾ ಕಾರ್ಖಾನೆ ವಿರುದ್ದ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್‌ಪಿಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿನಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಲ್ಹಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು? ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು? ಎಂಬುದಕ್ಕೆ ಉತ್ತರಿಸಿದ ಸಿಎಂ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...