Homeಕರ್ನಾಟಕಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

- Advertisement -
- Advertisement -

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಶನಿವಾರ ಅವರು ಹಿರಿಯ ಪತ್ರಕರ್ತ ಮಣಿ ಅವರು ಬರೆದಿರುವ “ಮನು ಭಾರತ” ಪುಸ್ತಕವನ್ನು ಬಿಡುಗಡೆಗೊಳಿಸಿದರು. “ಮನು ಭಾರತ” ಪುಸ್ತಕವನ್ನು ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

“ವಿದ್ಯಾವಂತರು ವೈಚಾರಿಕತೆ, ಜಾತ್ಯಾತೀತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾವಂತರು ಎನಿಸಿಕೊಂಡವರು ಕನಿಷ್ಠ ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಮನುವಾದಿಗಳು ಸಂವಿಧಾನ ವಿರೋಧಿಗಳಾದ ಕಾರಣ ಅದು ಬದಲಾವಣೆ ಆಗಬೇಕು ಎನ್ನುತ್ತಾರೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ನೀಡಬೇಕು ಎಂದು ಸಂವಿಧಾನ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ನಮ್ಮಲ್ಲಿ ತಾರತಮ್ಯವಿದೆ. ಮನು ಸ್ಮೃತಿ, ಶಾಸ್ತ್ರದಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಮುಂದುವರಿದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

“ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಅಂಬೇಡ್ಕರ್ ಅವರಷ್ಟು ಅರ್ಥ ಮಾಡಿಕೊಂಡವರು ಬೇರೆ ಯಾರೂ ಇಲ್ಲ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸಂವಿಧಾನ ರಚಿಸುವ ಕೆಲಸ ಮಾಡುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದರು.
ಸಂವಿಧಾನ ಉತ್ತಮವೇ ಅಲ್ಲವೇ ಎಂಬುದು ದೇಶದ ಆಡಳಿತದ ಚುಕ್ಕಾಣಿ ಹಿಡಿದವರಲ್ಲಿ ಅದನ್ನು ಜಾರಿ ಮಾಡುವ ಬದ್ಧತೆ ಇದ್ದಾಗ ಗೊತ್ತಾಗುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

“ಜನರಿಗೆ ಮತದಾನದ ಹಕ್ಕಿನ ಜೊತೆಗೆ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವ ಸಹ ಇರಬೇಕಾಗುತ್ತದೆ. ಅವಕಾಶಗಳಿಂದ ವಂಚಿತರಾದ ಜನತೆಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬದಿದ್ದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ. ಮುಂದುವರಿದ ಜಾತಿಯಲ್ಲಿರುವ ಬಡವರಿಗೆ ಮೀಸಲಾತಿಯಲ್ಲ, ಆರ್ಥಿಕ, ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದನ್ನು ನಾನು ಯಾವತ್ತೂ ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗಾಗಿ ಕ್ಷೀರಭಾಗ್ಯ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆ ಯೋಜನೆಯಲ್ಲಿ ಎಲ್ಲ ವರ್ಗದ ಬಡವರು ಸೇರಿದ್ದರು. ಅದೇ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಮುಂದುವರಿದ ವರ್ಗಗಳ ಬಡವರಲ್ಲಿ ಶಕ್ತಿ ತುಂಬ ಕೆಲಸ ಮಾಡಬೇಕು. ಅಂಬೇಡ್ಕರ್ ಅವರಿಗೆ ಇದ್ದ ದೂರದೃಷ್ಟಿಯೇ ಬೇರೆ. ಅವರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಬಸವಣ್ಣನವರಂತೆ ಅಂಬೇಡ್ಕರ್ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ. ಅದು ಸರ್ವಕಾಲಿಕ ಮತ್ತು ಸರ್ವ ಜನರಿಗೆ ಅನ್ವಯ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

“ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ಹಿಂದೂಗಳಲ್ಲೇ ಇರುವ ಬಡತನ, ತಾರತಮ್ಯ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬಿಜೆಪಿಯವರು ಎಂದಾದರೂ ಮಾತನಾಡುವರೇ? ಅದನ್ನು ಹೇಳಿದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ಮೇಲ್ಜಾತಿಯವರ ವಿರೋಧಿ ಎಂದು ಟೀಕೆ ಮಾಡುತ್ತಾರೆ. ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಪ್ರಧಾನಿಗಳು ಕಳೆದ ಏಳು ವರ್ಷಗಳಲ್ಲಿ ಒಂದು ದಿನವೂ ವಿಶ್ಲೇಷಣೆ ಮಾಡಿಲ್ಲ. ಜಿಡಿಪಿ ಬೆಳವಣಿಗೆ, ನಿರುದ್ಯೋಗ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಅವರಲ್ಲಿ ಶಕ್ತಿ ತುಂಬುವುದು ಹೇಗೆ ಎಂಬ ಬಗ್ಗೆ ಎಂದಾದರೂ ಚರ್ಚೆ ಆಗಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಪತ್ರಕರ್ತ, ವರದಿಗಾರನ ವೃತ್ತಿ ಬದುಕು ಸಾರ್ಥಕ ಆಗಬೇಕಾದರೆ ಆತನ ಬರವಣಿಗೆ ಜನರನ್ನು ತಲುಪಬೇಕು. ಟಿವಿ ಮಾಧ್ಯಮ ಬಂದ ಬಳಿಕ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಟಿವಿಗಳಲ್ಲಿ ಅತಿ ರಂಜಿತ ವರದಿಗಳ ಪ್ರಸಾರವಾಗುವುದು ಇದಕ್ಕೆ ಕಾರಣ. ನಿತ್ಯವೂ ನಾನು ಒಂದು ಗಂಟೆ ಕಾಲ ನಾನು ಪತ್ರಿಕೆಗಳನ್ನು ಓದುತ್ತೇನೆ. ಮಾಧ್ಯಮ ಈಗ ವ್ಯಾಪಾರೀಕರಣಕ್ಕೆ ಒಳಗಾಗಿದೆ. ವಾಸ್ತವವನ್ನು ಬಿಚ್ಚಿಡುವ, ವರದಿ ಮಾಡುವ ಕಾರ್ಯಕ್ಕಿಂತ ಜನರ ಅಭಿರುಚಿಗೆ ಅನುಗುಣವಾಗಿ ಸುದ್ದಿ ಬಿತ್ತರವಾಗುತ್ತಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ, ಆರ್ಥಿಕ ಸ್ಥಿತಿ ಮತ್ತು ನಮ್ಮ ಬದುಕನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಧ್ಯಮದಿಂದ ಆಗುತ್ತಿಲ್ಲ. ಸಮಾಜದ ಅಂಕುಡೊಂಕು ತಿದ್ದುವ ಬದಲಾವಣೆ ತರುವ ಕೆಲಸವನ್ನು ಮಾಧ್ಯಮಗಳು ದಿಟ್ಟತನದಿಂದ ಮಾಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...