Homeಕರ್ನಾಟಕಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

- Advertisement -
- Advertisement -

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಶನಿವಾರ ಅವರು ಹಿರಿಯ ಪತ್ರಕರ್ತ ಮಣಿ ಅವರು ಬರೆದಿರುವ “ಮನು ಭಾರತ” ಪುಸ್ತಕವನ್ನು ಬಿಡುಗಡೆಗೊಳಿಸಿದರು. “ಮನು ಭಾರತ” ಪುಸ್ತಕವನ್ನು ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

“ವಿದ್ಯಾವಂತರು ವೈಚಾರಿಕತೆ, ಜಾತ್ಯಾತೀತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾವಂತರು ಎನಿಸಿಕೊಂಡವರು ಕನಿಷ್ಠ ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಮನುವಾದಿಗಳು ಸಂವಿಧಾನ ವಿರೋಧಿಗಳಾದ ಕಾರಣ ಅದು ಬದಲಾವಣೆ ಆಗಬೇಕು ಎನ್ನುತ್ತಾರೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ನೀಡಬೇಕು ಎಂದು ಸಂವಿಧಾನ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ನಮ್ಮಲ್ಲಿ ತಾರತಮ್ಯವಿದೆ. ಮನು ಸ್ಮೃತಿ, ಶಾಸ್ತ್ರದಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಮುಂದುವರಿದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

“ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಅಂಬೇಡ್ಕರ್ ಅವರಷ್ಟು ಅರ್ಥ ಮಾಡಿಕೊಂಡವರು ಬೇರೆ ಯಾರೂ ಇಲ್ಲ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸಂವಿಧಾನ ರಚಿಸುವ ಕೆಲಸ ಮಾಡುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದರು.
ಸಂವಿಧಾನ ಉತ್ತಮವೇ ಅಲ್ಲವೇ ಎಂಬುದು ದೇಶದ ಆಡಳಿತದ ಚುಕ್ಕಾಣಿ ಹಿಡಿದವರಲ್ಲಿ ಅದನ್ನು ಜಾರಿ ಮಾಡುವ ಬದ್ಧತೆ ಇದ್ದಾಗ ಗೊತ್ತಾಗುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

“ಜನರಿಗೆ ಮತದಾನದ ಹಕ್ಕಿನ ಜೊತೆಗೆ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವ ಸಹ ಇರಬೇಕಾಗುತ್ತದೆ. ಅವಕಾಶಗಳಿಂದ ವಂಚಿತರಾದ ಜನತೆಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬದಿದ್ದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ. ಮುಂದುವರಿದ ಜಾತಿಯಲ್ಲಿರುವ ಬಡವರಿಗೆ ಮೀಸಲಾತಿಯಲ್ಲ, ಆರ್ಥಿಕ, ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದನ್ನು ನಾನು ಯಾವತ್ತೂ ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗಾಗಿ ಕ್ಷೀರಭಾಗ್ಯ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆ ಯೋಜನೆಯಲ್ಲಿ ಎಲ್ಲ ವರ್ಗದ ಬಡವರು ಸೇರಿದ್ದರು. ಅದೇ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಮುಂದುವರಿದ ವರ್ಗಗಳ ಬಡವರಲ್ಲಿ ಶಕ್ತಿ ತುಂಬ ಕೆಲಸ ಮಾಡಬೇಕು. ಅಂಬೇಡ್ಕರ್ ಅವರಿಗೆ ಇದ್ದ ದೂರದೃಷ್ಟಿಯೇ ಬೇರೆ. ಅವರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಬಸವಣ್ಣನವರಂತೆ ಅಂಬೇಡ್ಕರ್ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ. ಅದು ಸರ್ವಕಾಲಿಕ ಮತ್ತು ಸರ್ವ ಜನರಿಗೆ ಅನ್ವಯ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

“ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ಹಿಂದೂಗಳಲ್ಲೇ ಇರುವ ಬಡತನ, ತಾರತಮ್ಯ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬಿಜೆಪಿಯವರು ಎಂದಾದರೂ ಮಾತನಾಡುವರೇ? ಅದನ್ನು ಹೇಳಿದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ಮೇಲ್ಜಾತಿಯವರ ವಿರೋಧಿ ಎಂದು ಟೀಕೆ ಮಾಡುತ್ತಾರೆ. ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಪ್ರಧಾನಿಗಳು ಕಳೆದ ಏಳು ವರ್ಷಗಳಲ್ಲಿ ಒಂದು ದಿನವೂ ವಿಶ್ಲೇಷಣೆ ಮಾಡಿಲ್ಲ. ಜಿಡಿಪಿ ಬೆಳವಣಿಗೆ, ನಿರುದ್ಯೋಗ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಅವರಲ್ಲಿ ಶಕ್ತಿ ತುಂಬುವುದು ಹೇಗೆ ಎಂಬ ಬಗ್ಗೆ ಎಂದಾದರೂ ಚರ್ಚೆ ಆಗಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಪತ್ರಕರ್ತ, ವರದಿಗಾರನ ವೃತ್ತಿ ಬದುಕು ಸಾರ್ಥಕ ಆಗಬೇಕಾದರೆ ಆತನ ಬರವಣಿಗೆ ಜನರನ್ನು ತಲುಪಬೇಕು. ಟಿವಿ ಮಾಧ್ಯಮ ಬಂದ ಬಳಿಕ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಟಿವಿಗಳಲ್ಲಿ ಅತಿ ರಂಜಿತ ವರದಿಗಳ ಪ್ರಸಾರವಾಗುವುದು ಇದಕ್ಕೆ ಕಾರಣ. ನಿತ್ಯವೂ ನಾನು ಒಂದು ಗಂಟೆ ಕಾಲ ನಾನು ಪತ್ರಿಕೆಗಳನ್ನು ಓದುತ್ತೇನೆ. ಮಾಧ್ಯಮ ಈಗ ವ್ಯಾಪಾರೀಕರಣಕ್ಕೆ ಒಳಗಾಗಿದೆ. ವಾಸ್ತವವನ್ನು ಬಿಚ್ಚಿಡುವ, ವರದಿ ಮಾಡುವ ಕಾರ್ಯಕ್ಕಿಂತ ಜನರ ಅಭಿರುಚಿಗೆ ಅನುಗುಣವಾಗಿ ಸುದ್ದಿ ಬಿತ್ತರವಾಗುತ್ತಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ, ಆರ್ಥಿಕ ಸ್ಥಿತಿ ಮತ್ತು ನಮ್ಮ ಬದುಕನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಧ್ಯಮದಿಂದ ಆಗುತ್ತಿಲ್ಲ. ಸಮಾಜದ ಅಂಕುಡೊಂಕು ತಿದ್ದುವ ಬದಲಾವಣೆ ತರುವ ಕೆಲಸವನ್ನು ಮಾಧ್ಯಮಗಳು ದಿಟ್ಟತನದಿಂದ ಮಾಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...