Homeಕರ್ನಾಟಕಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

- Advertisement -
- Advertisement -

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಶನಿವಾರ ಅವರು ಹಿರಿಯ ಪತ್ರಕರ್ತ ಮಣಿ ಅವರು ಬರೆದಿರುವ “ಮನು ಭಾರತ” ಪುಸ್ತಕವನ್ನು ಬಿಡುಗಡೆಗೊಳಿಸಿದರು. “ಮನು ಭಾರತ” ಪುಸ್ತಕವನ್ನು ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

“ವಿದ್ಯಾವಂತರು ವೈಚಾರಿಕತೆ, ಜಾತ್ಯಾತೀತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾವಂತರು ಎನಿಸಿಕೊಂಡವರು ಕನಿಷ್ಠ ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಮನುವಾದಿಗಳು ಸಂವಿಧಾನ ವಿರೋಧಿಗಳಾದ ಕಾರಣ ಅದು ಬದಲಾವಣೆ ಆಗಬೇಕು ಎನ್ನುತ್ತಾರೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ನೀಡಬೇಕು ಎಂದು ಸಂವಿಧಾನ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ನಮ್ಮಲ್ಲಿ ತಾರತಮ್ಯವಿದೆ. ಮನು ಸ್ಮೃತಿ, ಶಾಸ್ತ್ರದಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಮುಂದುವರಿದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

“ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಅಂಬೇಡ್ಕರ್ ಅವರಷ್ಟು ಅರ್ಥ ಮಾಡಿಕೊಂಡವರು ಬೇರೆ ಯಾರೂ ಇಲ್ಲ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸಂವಿಧಾನ ರಚಿಸುವ ಕೆಲಸ ಮಾಡುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದರು.
ಸಂವಿಧಾನ ಉತ್ತಮವೇ ಅಲ್ಲವೇ ಎಂಬುದು ದೇಶದ ಆಡಳಿತದ ಚುಕ್ಕಾಣಿ ಹಿಡಿದವರಲ್ಲಿ ಅದನ್ನು ಜಾರಿ ಮಾಡುವ ಬದ್ಧತೆ ಇದ್ದಾಗ ಗೊತ್ತಾಗುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

“ಜನರಿಗೆ ಮತದಾನದ ಹಕ್ಕಿನ ಜೊತೆಗೆ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವ ಸಹ ಇರಬೇಕಾಗುತ್ತದೆ. ಅವಕಾಶಗಳಿಂದ ವಂಚಿತರಾದ ಜನತೆಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬದಿದ್ದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ. ಮುಂದುವರಿದ ಜಾತಿಯಲ್ಲಿರುವ ಬಡವರಿಗೆ ಮೀಸಲಾತಿಯಲ್ಲ, ಆರ್ಥಿಕ, ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದನ್ನು ನಾನು ಯಾವತ್ತೂ ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗಾಗಿ ಕ್ಷೀರಭಾಗ್ಯ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆ ಯೋಜನೆಯಲ್ಲಿ ಎಲ್ಲ ವರ್ಗದ ಬಡವರು ಸೇರಿದ್ದರು. ಅದೇ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಮುಂದುವರಿದ ವರ್ಗಗಳ ಬಡವರಲ್ಲಿ ಶಕ್ತಿ ತುಂಬ ಕೆಲಸ ಮಾಡಬೇಕು. ಅಂಬೇಡ್ಕರ್ ಅವರಿಗೆ ಇದ್ದ ದೂರದೃಷ್ಟಿಯೇ ಬೇರೆ. ಅವರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಬಸವಣ್ಣನವರಂತೆ ಅಂಬೇಡ್ಕರ್ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ. ಅದು ಸರ್ವಕಾಲಿಕ ಮತ್ತು ಸರ್ವ ಜನರಿಗೆ ಅನ್ವಯ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

“ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ಹಿಂದೂಗಳಲ್ಲೇ ಇರುವ ಬಡತನ, ತಾರತಮ್ಯ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬಿಜೆಪಿಯವರು ಎಂದಾದರೂ ಮಾತನಾಡುವರೇ? ಅದನ್ನು ಹೇಳಿದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ಮೇಲ್ಜಾತಿಯವರ ವಿರೋಧಿ ಎಂದು ಟೀಕೆ ಮಾಡುತ್ತಾರೆ. ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಪ್ರಧಾನಿಗಳು ಕಳೆದ ಏಳು ವರ್ಷಗಳಲ್ಲಿ ಒಂದು ದಿನವೂ ವಿಶ್ಲೇಷಣೆ ಮಾಡಿಲ್ಲ. ಜಿಡಿಪಿ ಬೆಳವಣಿಗೆ, ನಿರುದ್ಯೋಗ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಅವರಲ್ಲಿ ಶಕ್ತಿ ತುಂಬುವುದು ಹೇಗೆ ಎಂಬ ಬಗ್ಗೆ ಎಂದಾದರೂ ಚರ್ಚೆ ಆಗಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಪತ್ರಕರ್ತ, ವರದಿಗಾರನ ವೃತ್ತಿ ಬದುಕು ಸಾರ್ಥಕ ಆಗಬೇಕಾದರೆ ಆತನ ಬರವಣಿಗೆ ಜನರನ್ನು ತಲುಪಬೇಕು. ಟಿವಿ ಮಾಧ್ಯಮ ಬಂದ ಬಳಿಕ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಟಿವಿಗಳಲ್ಲಿ ಅತಿ ರಂಜಿತ ವರದಿಗಳ ಪ್ರಸಾರವಾಗುವುದು ಇದಕ್ಕೆ ಕಾರಣ. ನಿತ್ಯವೂ ನಾನು ಒಂದು ಗಂಟೆ ಕಾಲ ನಾನು ಪತ್ರಿಕೆಗಳನ್ನು ಓದುತ್ತೇನೆ. ಮಾಧ್ಯಮ ಈಗ ವ್ಯಾಪಾರೀಕರಣಕ್ಕೆ ಒಳಗಾಗಿದೆ. ವಾಸ್ತವವನ್ನು ಬಿಚ್ಚಿಡುವ, ವರದಿ ಮಾಡುವ ಕಾರ್ಯಕ್ಕಿಂತ ಜನರ ಅಭಿರುಚಿಗೆ ಅನುಗುಣವಾಗಿ ಸುದ್ದಿ ಬಿತ್ತರವಾಗುತ್ತಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ, ಆರ್ಥಿಕ ಸ್ಥಿತಿ ಮತ್ತು ನಮ್ಮ ಬದುಕನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಧ್ಯಮದಿಂದ ಆಗುತ್ತಿಲ್ಲ. ಸಮಾಜದ ಅಂಕುಡೊಂಕು ತಿದ್ದುವ ಬದಲಾವಣೆ ತರುವ ಕೆಲಸವನ್ನು ಮಾಧ್ಯಮಗಳು ದಿಟ್ಟತನದಿಂದ ಮಾಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....