Homeಕರ್ನಾಟಕಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 'ಜನ ಪ್ರಕಾಶನ' ವತಿಯಿಂದ ಭಾನುವಾರ ಜಸ್ಟೀಸ್‌ ಎಚ್.ಎನ್‌.ನಾಗಮೋಹನ್ ದಾಸ್ ಅವರ 'ಮೀಸಲಾತಿ; ಭ್ರಮೆ ಮತ್ತು ವಾಸ್ತವ' ಪುಸ್ತಕ ಬಿಡುಗಡೆ ಮಾಡಲಾಯಿತು.

- Advertisement -
- Advertisement -

ಈ ದೇಶದ ಸಂಪತ್ತನ್ನು ಆರಾಮಾಗಿ ಕುಳಿತು ಅನುಭವಿಸಿದವರು ಇಂದು ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಜನ ಪ್ರಕಾಶನ’ ವತಿಯಿಂದ ಭಾನುವಾರ ಆಯೋಜಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್ ಅವರ ‘ಮೀಸಲಾತಿ: ಭ್ರಮೆ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಹುಸಂಖ್ಯಾತ ಶೂದ್ರರನ್ನು ಅಕ್ಷರದಿಂದ ವಂಚಿಸಿ, ಅವರು ಸಂಪತ್ತನ್ನು ಅನುಭವಿಸಿದ್ದು ಮೀಸಲಾತಿ ಅಲ್ಲವೇ? ಈಗ ಮಾತ್ರ ಮೀಸಲಾತಿ ಯಾಕೆ? ಇನ್ನೆಷ್ಟು ದಿನ ಮೀಸಲಾತಿ ಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಇದು ಸರಿಯಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾತಿ ಕಾರಣಕ್ಕಾಗಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಉಂಟಾಗಿದೆ. ಇದು ಯಾಕಾಯಿತು? ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ಒಳಿತಿಗೆ ಜಾತಿ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಕಾಯಕ ಮಾಡಿ ಅಂತ ಹೇಳಿದ್ದರು. ಶ್ರಮ ಜೀವಿಗಳು ದುಡಿಯುತ್ತಿದ್ದರೆ, ಆ ಒಂದು ಸಮುದಾಯ ಮಾತ್ರ ಕುಳಿತುಕೊಂಡು ಮಜಾ ಮಾಡುತ್ತಿತ್ತು. ಆಗ ಅವರು ಅನುಭವಿಸಿದ್ದು ಅಲಿಖಿತ ಮೀಸಲಾತಿ ಅಲ್ಲವೇ? ಈಗ ಅವರೇ ಮೀಸಲಾತಿ ಯಾಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಸಮಾನತೆಗೆ ಕಾರಣರಾದವರು ಈಗ ಮೀಸಲಾತಿಯನ್ನು ಪ್ರಶ್ನೆ ಮಾಡುತ್ತಾರೆ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ 4635 ಜಾತಿಗಳಿವೆ. ಇವನ್ನೆಲ್ಲ ಹುಟ್ಟು ಹಾಕಿದವರು ಯಾರು? ಈಗ ಅವರೇ ಪ್ರಶ್ನೆ ಕೇಳುತ್ತಾರೆ. ನಾನೇದಾರೂ ಈ ಬಗ್ಗೆ ಪ್ರಶ್ನೆ ಕೇಳಿದರೆ ಎಲ್ಲರೂ ನನ್ನ ಮೈಮೇಲೆ ಬೀಳುತ್ತಾರೆ. ನಮ್ಮವರು ಒಬ್ಬರೂ ಮಾತನಾಡಲ್ಲ. ಇದು ವಾಸ್ತವ ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದರು.

ಇದನ್ನೂ ಓದಿರಿ: ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಭಾರತಕ್ಕೆ ಸ್ವಾತಂತ್ರ್ಯ ಬಂದ 21 ವರ್ಷಗಳ ನಂತರ ಹಿಂದುಳಿದ ಜಾತಿಗಳಿಗೆ (ಒಬಿಸಿ) ಮೀಸಲಾತಿ ನೀಡಲಾಯಿತು. ನಾವು ಎಲ್ಲವನ್ನೂ ಸಹಿಸಿಕೊಂಡು ಸುಮ್ಮನಿದ್ದೇವೆ. ಸಂವಿಧಾನ ಜಾರಿಯಾದಾಗ ಪರಿಶಿಷ್ಟರಿಗೆ ಮೀಸಲಾತಿ ಸಿಕ್ಕಿತು. ಆದರೆ, ಕೇಂದ್ರದಲ್ಲಿ ವಿ ಪಿ ಸಿಂಗ್ ಅಧಿಕಾರಕ್ಕೆ ಬರುವವರೆಗೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಿಗಲಿಲ್ಲ ಎಂದು ಇತಿಹಾಸ ಮೆಲುಕು ಹಾಕಿದರು.

ನಾವೀಗ ಚಲನರಹಿತವಾದ ಸಮಾಜದಲ್ಲಿದ್ದೇವೆ. ಸಮಾಜಕ್ಕೆ ಚಲನೆ ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣ, ಅಧಿಕಾರ ಮತ್ತು ಸಂಪತ್ತಿನಲ್ಲಿ ಸಮಾನತೆ ಬಂದಾಗ ಬದಲಾವಣೆ ಸಾಧ್ಯ. ಸಮಾಜಕ್ಕೆ ಚಲನಶೀಲತೆ ಬಂದಾಗ ಬದಲಾವಣೆ ಸಾಧ್ಯ. ಇದರ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕು. ಕೇವಲ ರಾಜಕೀಯ ಸ್ವಾತಂತ್ರ್ಯ ಇದ್ದರೆ ಸಾಲದು. ಅದರ ಜತೆಗೆ ಆರ್ಥಿಕ ಸ್ವಾತಂತ್ರ ಇದ್ದಾಗ ಮಾತ್ರ ನಾವು ಸ್ವಾತಂತ್ರ ಪಡೆದುಕೊಂಡಿದ್ದು ಸಾರ್ಥಕವಾಗುತ್ತದೆ ಎಂದು ಎಚ್ಚರಿಸಿದರು.

“ಸವರ್ಣೀಯ ಬಡವರಿಗೆ ಮೋದಿ ಶೇ.10ರಷ್ಟು ಮೀಸಲಾತಿ ನೀಡಿದ್ದಾರೆ. ಇದಕ್ಕೆ ಸಂವಿಧಾನದಲ್ಲಿ ಅವಕಾಶ ಇದೆಯಾ? ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂಬ ಕಾನೂನಿದೆಯಾ? ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಒಂದೇ ದಿನದಲ್ಲಿ ಮೀಸಲಾತಿ ಜಾರಿಗೆ ತಂದರು. ಅಂಬೇಡ್ಕರ್ ಮೀಸಲಾತಿ ಬಗ್ಗೆ ಸಾಕಷ್ಟು ಸ್ಪಷ್ಟನೆ ಕೊಟ್ಟಿದ್ದರೂ ಮೀಸಲಾತಿ ಇನ್ನೂ ಎಷ್ಟು ವರ್ಷ ಎಂದು ಕೇಳುತ್ತಾರೆ. ಹಾಗಾಗಿ ಇಂತಹ ಒಂದು ಪುಸ್ತಕ ಬೇಕಾಗಿತ್ತು. ಈ ಪುಸ್ತಕ ಸಂಗ್ರಹ ಯೋಗ್ಯವಾಗಿದೆ‘” ಎಂದು ಜಸ್ಟೀಸ್ ದಾಸ್‌ ಅವರ ಕಾರ್ಯವನ್ನು ಶ್ಲಾಘಿಸಿದರು.

“ಮೀಸಲಾತಿ ಕುರಿತಾದ ಈ ಪುಸ್ತಕ ಚಿಕ್ಕದಾಗಿ, ಚೊಕ್ಕವಾಗಿದೆ. 136 ಪುಟಗಳ ಈ ಪುಸ್ತಕದಲ್ಲಿ ಸಾಕಷ್ಟು ಮಾಹಿತಿ ಇದೆ. ನಾಗಮೋಹನ್ ದಾಸ್ ಅವರ ‘ಸಂವಿಧಾನ ಓದು’ ಕಿರು ಹೊತ್ತಿಗೆಯನ್ನು ಕೂಡ ನಾನು ಓದಿದ್ದೇನೆ. ನನ್ನ ಪ್ರಕಾರ ಈ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಸಂವಿಧಾನ ಓದಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ವಿಚಾರಣೆ ಇಲ್ಲದೆ ಬಂಧನವಾಗುತ್ತಿದೆ: ಜಸ್ಟೀಸ್‌ ನಾಗಮೋಹನ ದಾಸ್‌

ಜಸ್ಟೀಸ್ ನಾಗಮೋಹನ ದಾಸ್ ಅವರು ಮಾತನಾಡಿ, “ಮುಕ್ತವಾದ ಚರ್ಚೆಗಳು ಇಲ್ಲದ ಕಡೆ ಪ್ರಗತಿ ಸಾಧ್ಯವಿಲ್ಲ. ನಮ್ಮ ಕಾಲದ ಸಮಸ್ಯೆಗಳು ಮತ್ತು ಅದಕ್ಕಿರುವ ಪರಿಹಾರ ಎನು ಎಂಬ ಬಗ್ಗೆ ನಾವು ಯೋಚಿಸಬೇಕು. ಇಂದು ದೇಶದಲ್ಲಿ ವಿಮರ್ಶೆ, ಟೀಕೆ ಮಾಡುವಂತಿಲ್ಲ. ಟೀಕೆ, ವಿಮರ್ಶೆ ಮಾಡಿದರೆ ವಿಚಾರಣೆ ಇಲ್ಲದೆಯೇ ಬಂಧಿಸಲಾಗುತ್ತಿದೆ. ಲೇಖಕಿ ತೀಸ್ತಾ ಸೆಟಲ್ವಾಡ್‌ ಬಂಧನವಾಗಿರುವುದೂ ಕೂಡ ಇದೇ ಕಾರಣದಿಂದ” ಎಂದು ವಿಷಾದಿಸಿದರು.

ನಾವು ಈ ಹಿಂದೆ ಮುದ್ರಣ ಮಾಡಿದ್ದ ಸಂವಿಧಾನ ಓದು ಪುಸ್ತಕ ವಿದ್ಯಾವಂತರಿಗೆ ತಲುಪುತ್ತಿದೆ. ಸಂವಿಧಾನ ಓದು ಜಾಥಾ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ನನಗೆ ಮೀಸಲಾತಿ ಯಾಕೆ ಬೇಕು ಎಂಬ ಪ್ರಶ್ನೆ ಕೇಳಿದ್ದಾರೆ. ಸಮಾನತೆಯನ್ನು ಬಯಸುವ ನಾವು ಕೆಲವೊಂದು ಜಾತಿಗೆ ಮಾತ್ರ ಯಾಕೆ ಮೀಸಲಾತಿ ನೀಡಬೇಕೆಂದು ಪ್ರಶ್ನಿಸಿದ್ದಾರೆ. ಮೀಸಲಾತಿ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಲು ನಾನು ಈ ಪುಸ್ತಕ ಬರೆದಿದ್ದೇವೆ ಎಂದರು.

“ಪ್ರಸ್ತುತ ದೇಶದಲ್ಲಿ ತೊಡುವ ಬಟ್ಟೆ ತಿನ್ನುವ ಆಹಾರದ ಬಗ್ಗೆ ವಿರೋಧ ಮಾಡಲಾಗುತ್ತಿದೆ. ಇದು ನನ್ನ ದೇಶವಲ್ಲ. ನನ್ನ ದೇಶದಲ್ಲಿ ಎಲ್ಲ ಧರ್ಮದ ಜನರು ಒಬ್ಬರನ್ನೊಬ್ಬರು ಗೌರವಿಸುತ್ತಾರೆ, ಪ್ರೀತಿಸುತ್ತಾರೆ” ಎಂದು ತಿಳಿಸಿದರು.

“ಸಂವಿಧಾನಾತ್ಮಕವಾಗಿ ಮೀಸಲಾತಿ ಪಡೆಯುತ್ತಿರುವವರೂ ಕೂಡ ಮೀಸಲಾತಿ ವಿರೋಧಿಸುತ್ತಾರೆ. ಈ ದೇಶದ ಎಲ್ಲ ಜಾತಿ ಧರ್ಮದ ಜನರಿಗೆ ಮೀಸಲಾತಿ ಸಿಗುತ್ತಿದೆ. ಒಂದು ವರ್ಗದ ಜನರು ಮೀಸಲಾತಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆ ಭ್ರಮೆಗಳನ್ನು ನಾವು ಒಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ತಲೆಬಾಗಿಲು ಬೇರೆಯವರಿಗೆ ಕೊಟ್ಟು ನಾವು ಬಾಗಿಲು ಕಾಯುತ್ತಿದ್ದೇವೆ: ಹಂಸಲೇಖ

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, “ನಮ್ಮಮನೆಯ ತಲೆಬಾಗಿಲನ್ನು ಬೇರೆಯವರಿಗೆ ಕೊಟ್ಟು ನಾವೀಗ ನಮ್ಮ ಮನೆಯ ಬಾಗಿಲು ಕಾಯುವ ಸ್ಥಿತಿ ಬಂದಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

“ಜಗತ್ತಿನಲ್ಲಿ ಪರಿವರ್ತನೆ ಆದಾಗ ಮಹಾಕಾವ್ಯ ಹುಟ್ಟುತ್ತದೆ. ದೇಶದ ಈಗಿನ ಸಂದರ್ಭಕ್ಕೆ ಇದು ಒಂದು ಮಹಾಕಾವ್ಯ. ನಾವು ಹಾಡಬೇಕಾಗಿರುವುದು ಹರಿಕಥೆ ಗಿರಿಕತೆ ಅಲ್ಲ. ಸಂವಿಧಾನ ಗೀತೆಯನ್ನು ಹಾಡಬೇಕು. ಆ ಕೆಲಸ ನಾವು ಮಾಡಲೇಬೇಕು” ಎಂದು ಎಚ್ಚರಿಸಿದರು.

“ಮೀಸಲಾತಿಗೆ ಶಾಶ್ವತ ಪರಿಹಾರ ಎಂದರೆ ಸುಸ್ಥಿತಿಯಲ್ಲಿರುವ ದಲಿತರು ತನ್ನ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅಂದರೆ, ತಿಂದ ಮೇಲೆ ಋಣ ತೀರಿಸಬೇಕು ಎಂದರ್ಥ. ಆಗ ಮಾತ್ರ ಅದು ಹಂಗಿಲ್ಲದ ಮೀಸಲಾತಿ ಆಗುತ್ತದೆ” ಎಂದು ಕಿವಿಮಾತು ಹೇಳಿದರು.

“12ನೇ ಶತಮಾನದಲ್ಲಿ ಈ ಪ್ರಯೋಗ ಆಗಿದೆ. ಶರಣರು ಬಸವಣ್ಣನವರನ್ನು ಮುಂದಿಟ್ಟುಕೊಂಡು ಮೀಸಲಾತಿಯನ್ನು ದಾಸೋಹವಾಗಿ ಪರಿವರ್ತನೆ ಮಾಡಿದ್ದರು. ನಂತರ ಅಕ್ಷರ ದಾಸೋಹ ಮಾಡಿದ್ದರು. ಆ ಅಕ್ಷರ ಮಂಟಪ ನಮಗೆ ಹಂಗಿಲ್ಲದ ಮೀಸಲಾತಿ ಹೇಳಿಕೊಟ್ಟಿದೆ. ಹಂಗಿಲ್ಲದ ಮೀಸಲಾತಿಯನ್ನು ಸಮಾಜಕ್ಕೆ ಕೊಡಬೇಕು” ಎಂದು ಆಶಿಸಿದರು.

ಮೀಸಲಾತಿ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರ ಮಾಡಿದ ಪ್ರೊ.ಟಿ.ಆರ್.ಚಂದ್ರಶೇಖರ್, ಚಿಂತಕ ಬಂಜಗೆರೆ ಜಯಪ್ರಕಾಶ್, ಹಿರಿಯ ಪತ್ರಕರ್ತರಾದ ಬಿ.ಎಂ.ಹನೀಫ್, ಜನ ಪ್ರಕಾಶನದ ರಾಜಶೇಖರ ಮೂರ್ತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...