Homeಕರ್ನಾಟಕಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 'ಜನ ಪ್ರಕಾಶನ' ವತಿಯಿಂದ ಭಾನುವಾರ ಜಸ್ಟೀಸ್‌ ಎಚ್.ಎನ್‌.ನಾಗಮೋಹನ್ ದಾಸ್ ಅವರ 'ಮೀಸಲಾತಿ; ಭ್ರಮೆ ಮತ್ತು ವಾಸ್ತವ' ಪುಸ್ತಕ ಬಿಡುಗಡೆ ಮಾಡಲಾಯಿತು.

- Advertisement -
- Advertisement -

ಈ ದೇಶದ ಸಂಪತ್ತನ್ನು ಆರಾಮಾಗಿ ಕುಳಿತು ಅನುಭವಿಸಿದವರು ಇಂದು ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಜನ ಪ್ರಕಾಶನ’ ವತಿಯಿಂದ ಭಾನುವಾರ ಆಯೋಜಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್ ಅವರ ‘ಮೀಸಲಾತಿ: ಭ್ರಮೆ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಹುಸಂಖ್ಯಾತ ಶೂದ್ರರನ್ನು ಅಕ್ಷರದಿಂದ ವಂಚಿಸಿ, ಅವರು ಸಂಪತ್ತನ್ನು ಅನುಭವಿಸಿದ್ದು ಮೀಸಲಾತಿ ಅಲ್ಲವೇ? ಈಗ ಮಾತ್ರ ಮೀಸಲಾತಿ ಯಾಕೆ? ಇನ್ನೆಷ್ಟು ದಿನ ಮೀಸಲಾತಿ ಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಇದು ಸರಿಯಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾತಿ ಕಾರಣಕ್ಕಾಗಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಉಂಟಾಗಿದೆ. ಇದು ಯಾಕಾಯಿತು? ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ಒಳಿತಿಗೆ ಜಾತಿ ವ್ಯವಸ್ಥೆಯನ್ನು ಗಟ್ಟಿಗೊಳಿಸಿದರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಕಾಯಕ ಮಾಡಿ ಅಂತ ಹೇಳಿದ್ದರು. ಶ್ರಮ ಜೀವಿಗಳು ದುಡಿಯುತ್ತಿದ್ದರೆ, ಆ ಒಂದು ಸಮುದಾಯ ಮಾತ್ರ ಕುಳಿತುಕೊಂಡು ಮಜಾ ಮಾಡುತ್ತಿತ್ತು. ಆಗ ಅವರು ಅನುಭವಿಸಿದ್ದು ಅಲಿಖಿತ ಮೀಸಲಾತಿ ಅಲ್ಲವೇ? ಈಗ ಅವರೇ ಮೀಸಲಾತಿ ಯಾಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಸಮಾನತೆಗೆ ಕಾರಣರಾದವರು ಈಗ ಮೀಸಲಾತಿಯನ್ನು ಪ್ರಶ್ನೆ ಮಾಡುತ್ತಾರೆ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ 4635 ಜಾತಿಗಳಿವೆ. ಇವನ್ನೆಲ್ಲ ಹುಟ್ಟು ಹಾಕಿದವರು ಯಾರು? ಈಗ ಅವರೇ ಪ್ರಶ್ನೆ ಕೇಳುತ್ತಾರೆ. ನಾನೇದಾರೂ ಈ ಬಗ್ಗೆ ಪ್ರಶ್ನೆ ಕೇಳಿದರೆ ಎಲ್ಲರೂ ನನ್ನ ಮೈಮೇಲೆ ಬೀಳುತ್ತಾರೆ. ನಮ್ಮವರು ಒಬ್ಬರೂ ಮಾತನಾಡಲ್ಲ. ಇದು ವಾಸ್ತವ ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದರು.

ಇದನ್ನೂ ಓದಿರಿ: ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಭಾರತಕ್ಕೆ ಸ್ವಾತಂತ್ರ್ಯ ಬಂದ 21 ವರ್ಷಗಳ ನಂತರ ಹಿಂದುಳಿದ ಜಾತಿಗಳಿಗೆ (ಒಬಿಸಿ) ಮೀಸಲಾತಿ ನೀಡಲಾಯಿತು. ನಾವು ಎಲ್ಲವನ್ನೂ ಸಹಿಸಿಕೊಂಡು ಸುಮ್ಮನಿದ್ದೇವೆ. ಸಂವಿಧಾನ ಜಾರಿಯಾದಾಗ ಪರಿಶಿಷ್ಟರಿಗೆ ಮೀಸಲಾತಿ ಸಿಕ್ಕಿತು. ಆದರೆ, ಕೇಂದ್ರದಲ್ಲಿ ವಿ ಪಿ ಸಿಂಗ್ ಅಧಿಕಾರಕ್ಕೆ ಬರುವವರೆಗೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಿಗಲಿಲ್ಲ ಎಂದು ಇತಿಹಾಸ ಮೆಲುಕು ಹಾಕಿದರು.

ನಾವೀಗ ಚಲನರಹಿತವಾದ ಸಮಾಜದಲ್ಲಿದ್ದೇವೆ. ಸಮಾಜಕ್ಕೆ ಚಲನೆ ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣ, ಅಧಿಕಾರ ಮತ್ತು ಸಂಪತ್ತಿನಲ್ಲಿ ಸಮಾನತೆ ಬಂದಾಗ ಬದಲಾವಣೆ ಸಾಧ್ಯ. ಸಮಾಜಕ್ಕೆ ಚಲನಶೀಲತೆ ಬಂದಾಗ ಬದಲಾವಣೆ ಸಾಧ್ಯ. ಇದರ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕು. ಕೇವಲ ರಾಜಕೀಯ ಸ್ವಾತಂತ್ರ್ಯ ಇದ್ದರೆ ಸಾಲದು. ಅದರ ಜತೆಗೆ ಆರ್ಥಿಕ ಸ್ವಾತಂತ್ರ ಇದ್ದಾಗ ಮಾತ್ರ ನಾವು ಸ್ವಾತಂತ್ರ ಪಡೆದುಕೊಂಡಿದ್ದು ಸಾರ್ಥಕವಾಗುತ್ತದೆ ಎಂದು ಎಚ್ಚರಿಸಿದರು.

“ಸವರ್ಣೀಯ ಬಡವರಿಗೆ ಮೋದಿ ಶೇ.10ರಷ್ಟು ಮೀಸಲಾತಿ ನೀಡಿದ್ದಾರೆ. ಇದಕ್ಕೆ ಸಂವಿಧಾನದಲ್ಲಿ ಅವಕಾಶ ಇದೆಯಾ? ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂಬ ಕಾನೂನಿದೆಯಾ? ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಒಂದೇ ದಿನದಲ್ಲಿ ಮೀಸಲಾತಿ ಜಾರಿಗೆ ತಂದರು. ಅಂಬೇಡ್ಕರ್ ಮೀಸಲಾತಿ ಬಗ್ಗೆ ಸಾಕಷ್ಟು ಸ್ಪಷ್ಟನೆ ಕೊಟ್ಟಿದ್ದರೂ ಮೀಸಲಾತಿ ಇನ್ನೂ ಎಷ್ಟು ವರ್ಷ ಎಂದು ಕೇಳುತ್ತಾರೆ. ಹಾಗಾಗಿ ಇಂತಹ ಒಂದು ಪುಸ್ತಕ ಬೇಕಾಗಿತ್ತು. ಈ ಪುಸ್ತಕ ಸಂಗ್ರಹ ಯೋಗ್ಯವಾಗಿದೆ‘” ಎಂದು ಜಸ್ಟೀಸ್ ದಾಸ್‌ ಅವರ ಕಾರ್ಯವನ್ನು ಶ್ಲಾಘಿಸಿದರು.

“ಮೀಸಲಾತಿ ಕುರಿತಾದ ಈ ಪುಸ್ತಕ ಚಿಕ್ಕದಾಗಿ, ಚೊಕ್ಕವಾಗಿದೆ. 136 ಪುಟಗಳ ಈ ಪುಸ್ತಕದಲ್ಲಿ ಸಾಕಷ್ಟು ಮಾಹಿತಿ ಇದೆ. ನಾಗಮೋಹನ್ ದಾಸ್ ಅವರ ‘ಸಂವಿಧಾನ ಓದು’ ಕಿರು ಹೊತ್ತಿಗೆಯನ್ನು ಕೂಡ ನಾನು ಓದಿದ್ದೇನೆ. ನನ್ನ ಪ್ರಕಾರ ಈ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಸಂವಿಧಾನ ಓದಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ವಿಚಾರಣೆ ಇಲ್ಲದೆ ಬಂಧನವಾಗುತ್ತಿದೆ: ಜಸ್ಟೀಸ್‌ ನಾಗಮೋಹನ ದಾಸ್‌

ಜಸ್ಟೀಸ್ ನಾಗಮೋಹನ ದಾಸ್ ಅವರು ಮಾತನಾಡಿ, “ಮುಕ್ತವಾದ ಚರ್ಚೆಗಳು ಇಲ್ಲದ ಕಡೆ ಪ್ರಗತಿ ಸಾಧ್ಯವಿಲ್ಲ. ನಮ್ಮ ಕಾಲದ ಸಮಸ್ಯೆಗಳು ಮತ್ತು ಅದಕ್ಕಿರುವ ಪರಿಹಾರ ಎನು ಎಂಬ ಬಗ್ಗೆ ನಾವು ಯೋಚಿಸಬೇಕು. ಇಂದು ದೇಶದಲ್ಲಿ ವಿಮರ್ಶೆ, ಟೀಕೆ ಮಾಡುವಂತಿಲ್ಲ. ಟೀಕೆ, ವಿಮರ್ಶೆ ಮಾಡಿದರೆ ವಿಚಾರಣೆ ಇಲ್ಲದೆಯೇ ಬಂಧಿಸಲಾಗುತ್ತಿದೆ. ಲೇಖಕಿ ತೀಸ್ತಾ ಸೆಟಲ್ವಾಡ್‌ ಬಂಧನವಾಗಿರುವುದೂ ಕೂಡ ಇದೇ ಕಾರಣದಿಂದ” ಎಂದು ವಿಷಾದಿಸಿದರು.

ನಾವು ಈ ಹಿಂದೆ ಮುದ್ರಣ ಮಾಡಿದ್ದ ಸಂವಿಧಾನ ಓದು ಪುಸ್ತಕ ವಿದ್ಯಾವಂತರಿಗೆ ತಲುಪುತ್ತಿದೆ. ಸಂವಿಧಾನ ಓದು ಜಾಥಾ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ನನಗೆ ಮೀಸಲಾತಿ ಯಾಕೆ ಬೇಕು ಎಂಬ ಪ್ರಶ್ನೆ ಕೇಳಿದ್ದಾರೆ. ಸಮಾನತೆಯನ್ನು ಬಯಸುವ ನಾವು ಕೆಲವೊಂದು ಜಾತಿಗೆ ಮಾತ್ರ ಯಾಕೆ ಮೀಸಲಾತಿ ನೀಡಬೇಕೆಂದು ಪ್ರಶ್ನಿಸಿದ್ದಾರೆ. ಮೀಸಲಾತಿ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಲು ನಾನು ಈ ಪುಸ್ತಕ ಬರೆದಿದ್ದೇವೆ ಎಂದರು.

“ಪ್ರಸ್ತುತ ದೇಶದಲ್ಲಿ ತೊಡುವ ಬಟ್ಟೆ ತಿನ್ನುವ ಆಹಾರದ ಬಗ್ಗೆ ವಿರೋಧ ಮಾಡಲಾಗುತ್ತಿದೆ. ಇದು ನನ್ನ ದೇಶವಲ್ಲ. ನನ್ನ ದೇಶದಲ್ಲಿ ಎಲ್ಲ ಧರ್ಮದ ಜನರು ಒಬ್ಬರನ್ನೊಬ್ಬರು ಗೌರವಿಸುತ್ತಾರೆ, ಪ್ರೀತಿಸುತ್ತಾರೆ” ಎಂದು ತಿಳಿಸಿದರು.

“ಸಂವಿಧಾನಾತ್ಮಕವಾಗಿ ಮೀಸಲಾತಿ ಪಡೆಯುತ್ತಿರುವವರೂ ಕೂಡ ಮೀಸಲಾತಿ ವಿರೋಧಿಸುತ್ತಾರೆ. ಈ ದೇಶದ ಎಲ್ಲ ಜಾತಿ ಧರ್ಮದ ಜನರಿಗೆ ಮೀಸಲಾತಿ ಸಿಗುತ್ತಿದೆ. ಒಂದು ವರ್ಗದ ಜನರು ಮೀಸಲಾತಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆ ಭ್ರಮೆಗಳನ್ನು ನಾವು ಒಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ತಲೆಬಾಗಿಲು ಬೇರೆಯವರಿಗೆ ಕೊಟ್ಟು ನಾವು ಬಾಗಿಲು ಕಾಯುತ್ತಿದ್ದೇವೆ: ಹಂಸಲೇಖ

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, “ನಮ್ಮಮನೆಯ ತಲೆಬಾಗಿಲನ್ನು ಬೇರೆಯವರಿಗೆ ಕೊಟ್ಟು ನಾವೀಗ ನಮ್ಮ ಮನೆಯ ಬಾಗಿಲು ಕಾಯುವ ಸ್ಥಿತಿ ಬಂದಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಕನಕದಾಸರ ಪಠ್ಯ ಕಡಿತಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಸ್ವಾಮೀಜಿ

“ಜಗತ್ತಿನಲ್ಲಿ ಪರಿವರ್ತನೆ ಆದಾಗ ಮಹಾಕಾವ್ಯ ಹುಟ್ಟುತ್ತದೆ. ದೇಶದ ಈಗಿನ ಸಂದರ್ಭಕ್ಕೆ ಇದು ಒಂದು ಮಹಾಕಾವ್ಯ. ನಾವು ಹಾಡಬೇಕಾಗಿರುವುದು ಹರಿಕಥೆ ಗಿರಿಕತೆ ಅಲ್ಲ. ಸಂವಿಧಾನ ಗೀತೆಯನ್ನು ಹಾಡಬೇಕು. ಆ ಕೆಲಸ ನಾವು ಮಾಡಲೇಬೇಕು” ಎಂದು ಎಚ್ಚರಿಸಿದರು.

“ಮೀಸಲಾತಿಗೆ ಶಾಶ್ವತ ಪರಿಹಾರ ಎಂದರೆ ಸುಸ್ಥಿತಿಯಲ್ಲಿರುವ ದಲಿತರು ತನ್ನ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅಂದರೆ, ತಿಂದ ಮೇಲೆ ಋಣ ತೀರಿಸಬೇಕು ಎಂದರ್ಥ. ಆಗ ಮಾತ್ರ ಅದು ಹಂಗಿಲ್ಲದ ಮೀಸಲಾತಿ ಆಗುತ್ತದೆ” ಎಂದು ಕಿವಿಮಾತು ಹೇಳಿದರು.

“12ನೇ ಶತಮಾನದಲ್ಲಿ ಈ ಪ್ರಯೋಗ ಆಗಿದೆ. ಶರಣರು ಬಸವಣ್ಣನವರನ್ನು ಮುಂದಿಟ್ಟುಕೊಂಡು ಮೀಸಲಾತಿಯನ್ನು ದಾಸೋಹವಾಗಿ ಪರಿವರ್ತನೆ ಮಾಡಿದ್ದರು. ನಂತರ ಅಕ್ಷರ ದಾಸೋಹ ಮಾಡಿದ್ದರು. ಆ ಅಕ್ಷರ ಮಂಟಪ ನಮಗೆ ಹಂಗಿಲ್ಲದ ಮೀಸಲಾತಿ ಹೇಳಿಕೊಟ್ಟಿದೆ. ಹಂಗಿಲ್ಲದ ಮೀಸಲಾತಿಯನ್ನು ಸಮಾಜಕ್ಕೆ ಕೊಡಬೇಕು” ಎಂದು ಆಶಿಸಿದರು.

ಮೀಸಲಾತಿ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರ ಮಾಡಿದ ಪ್ರೊ.ಟಿ.ಆರ್.ಚಂದ್ರಶೇಖರ್, ಚಿಂತಕ ಬಂಜಗೆರೆ ಜಯಪ್ರಕಾಶ್, ಹಿರಿಯ ಪತ್ರಕರ್ತರಾದ ಬಿ.ಎಂ.ಹನೀಫ್, ಜನ ಪ್ರಕಾಶನದ ರಾಜಶೇಖರ ಮೂರ್ತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...