Homeಮುಖಪುಟ"ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?"

“ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸಾವರ್ಕರ್‌‌ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ರಾಜನಾಥ್‌ಸಿಂಗ್‌ ಹೇಳಿರುವುದಕ್ಕೆ ಇತಿಹಾಸತಜ್ಞ ಪ್ರೊ.ಎಸ್‌.ಚಂದ್ರಶೇಖರ್ ಪ್ರತಿಕ್ರಿಯೆ

- Advertisement -
- Advertisement -

“ಬದುಕಿರುವ ಎಚ್‌.ಡಿ.ದೇವೇಗೌಡರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿಯ ಬಗ್ಗೆ ಹೇಳುವುದಿಲ್ಲವೇ? ಸಾವರ್ಕರ್‌‌ ಅವರು ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಹೇಳುವುದರ ಹಿಂದೆ ಸಾವರ್ಕರ್‌‌ ಮೇಲಿರುವ ಆರೋಪಕ್ಕೆ ಜನಮನ್ನಣೆ ಸಿಗುವಂತೆ ಮಾಡುವ ಉನ್ನಾರವಿದೆ” ಎಂದು ಪ್ರೊ.ಎಸ್.ಚಂದ್ರಶೇಖರ್‌ ಹೇಳಿದರು.

“ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಹೇಳಿರುವುದಕ್ಕೆ ‘ನಾನುಗೌರಿ.ಕಾಮ್‌’ನೊಂದಿಗೆ ಅವರು ಪ್ರತಿಕ್ರಿಯಿಸಿದರು.

“ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆರ್‌‌ಎಸ್‌ಎಸ್‌ ಹೊಗಳಿದ್ದರು ಎಂದು ಸಚಿವ ಸಿ.ಟಿ.ರವಿ ಹೇಳಿದ್ದರು. ಆ ಮೇಲೆ ದೇವೇಗೌಡರೇ ಸ್ಪಷ್ಟನೆ ನೀಡಿದರು. ಬದುಕಿರುವವರ ಬಗ್ಗೆ ಹೀಗೆ ಹೇಳುವವರು, ತೀರಿಕೊಂಡವರ ಬಗ್ಗೆ ಹೇಳುವುದಿಲ್ಲವೆ?” ಎಂದು ಎಚ್ಚರಿಸಿದರು.

ಪ್ರೊ.ಎಸ್‌.ಚಂದ್ರಶೇಖರ್‌‌

“ದೇವೇಗೌಡರು ಸುಳ್ಳು ಹೇಳಬೇಡಿ ಎಂದು ಹೇಳಿದ್ದಾರೆ. ಆದರೆ ಸುಳ್ಳು ಹೇಳಬೇಡಿ ಎಂದು ಪ್ರತಿಕ್ರಿಯಿಸಲು ಗಾಂಧಿ ಇಲ್ಲವಲ್ಲ. ವ್ಯವಸ್ಥಿತವಾಗಿ ಈ ಥರದ ನೆರೇಟಿವ್‌ಗಳನ್ನು ಬೆಳೆಸಲಾಗುತ್ತದೆ. ಅವರ ಮೇಲೆ ಇರುವ ಆರೋಪಗಳನ್ನು ರಿವರ್ಸ್ ಮಾಡಲು ಈ ಥರ ಹೇಳಿಕೆಗಳನ್ನು ನೀಡುತ್ತಾ ಹೋಗುತ್ತಾರೆ” ಎಂದು ಅಭಿಪ್ರಾಯಪಟ್ಟರು.

“ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿಯವರು ಆರ್‌‌ಎಸ್‌ಎಸ್‌ಗೆ ಹೋಗಿದ್ದರು. -ನೀವು ಅಲ್ಲಿಗೆ ಹೋಗಬೇಡಿ, ನಿಮ್ಮನ್ನು ಬಳಸಿಕೊಳ್ಳುತ್ತಾರೆ- ಎಂದು ಅವರ ಮಗಳು ಎಚ್ಚರಿಸಿದ್ದರು. ಅಲ್ಲಿ ಪ್ರಣವ್‌ ಏನು ಮಾತನಾಡಿದ್ದರು ಎಂಬುದು ಮುಖ್ಯವಾಗುವುದಿಲ್ಲ. ಅಲ್ಲಿಗೆ ಹೋಗಿದ್ದರು ಎಂಬುದಷ್ಟೇ ಮುಖ್ಯವಾಗುತ್ತದೆ. ಈ ಥರದ್ದು ರಾಜಕಾರಣದಲ್ಲಿ ನಡೆಯುತ್ತಿರುತ್ತದೆ. ಅದು ಆಶ್ಚರ್ಯವೇನಲ್ಲ” ಎಂದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

“ಆರ್‌‌ಎಸ್‌‌ಎಸ್‌ ಮೂಲವನ್ನು ಬಿಟ್ಟು ಗಾಂಧೀಜಿಗೆ ಹತ್ತಿರವಿದ್ದ ಯಾರಾದರೂ ಈ ಬಗ್ಗೆ ದಾಖಲಿಸಿದ್ದಾರಾ ಎಂದು ಕೇಳಬೇಕಾಗುತ್ತದೆ. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರು ಗಾಂಧಿಗೆ ಹತ್ತಿರವಿದ್ದರು. ಜವಹರಲಾಲ್‌ ನೆಹರೂ ಅವರಿದ್ದರು. ಇವರ್‍ಯಾರಾದರೂ ಹೇಳಿದ್ದರೆ ದಾಖಲೆ ಇದ್ದರೆ ತಿಳಿಸಬೇಕು” ಎಂದು ಆಗ್ರಹಿಸಿದರು.

“ರಕ್ಷಣಾ ಸಚಿವರೇ ಹೀಗೆ ಹೇಳಿದ್ದರು ಎಂದು ಮತ್ತೊಬ್ಬ ಹೇಳಲು ಶುರು ಮಾಡುತ್ತಾನೆ. ಹೀಗೆ ಒಬ್ಬರಿಂದ ಒಬ್ಬರಿಗೆ ಸುಳ್ಳು ಹರಡುತ್ತಾ ಹೋಗುತ್ತದೆ. ಈ ಥರದಲ್ಲಿ ಸುಳ್ಳುಗಳ ಪ್ರತಿಪಾದನೆ ಬೆಳೆಯುತ್ತಾ ಹೋಗುತ್ತದೆ. ಈ ಹೊತ್ತಿನ ರಾಜಕಾರಣ, ಅಡ್ಡ ದಾರಿಯ ರಾಜಕಾರಣ. ಯಾರ ಬಾಯಲ್ಲಿ ಏನು ಬೇಕಾದರೂ ತುರುಕುತ್ತಾರೆ” ಎಂದು ಟೀಕಿಸಿದರು.

ಪತ್ರಕರ್ತರಾದ ಸ್ವಾತಿ ಚತುರ್ವೇದಿಯವರು ಟ್ವೀಟ್‌ ಮಾಡಿದ್ದು, ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಬರೆದಿರುವ ಪತ್ರದ ಕುರಿತು ಹಂಚಿಕೊಂಡಿದ್ದಾರೆ. ಆದರೆ ಕ್ಷಮಾಪಣೆ ಕೇಳುವಂತೆ ಗಾಂಧೀಜಿಯವರು ಈ ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷಣ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದು ಕುಟುಕಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬವರು ಟ್ಟೀಟ್‌ ಮಾಡಿದ್ದಾರೆ.

“ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

“ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...