Homeಮುಖಪುಟ"ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?"

“ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸಾವರ್ಕರ್‌‌ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ರಾಜನಾಥ್‌ಸಿಂಗ್‌ ಹೇಳಿರುವುದಕ್ಕೆ ಇತಿಹಾಸತಜ್ಞ ಪ್ರೊ.ಎಸ್‌.ಚಂದ್ರಶೇಖರ್ ಪ್ರತಿಕ್ರಿಯೆ

- Advertisement -
- Advertisement -

“ಬದುಕಿರುವ ಎಚ್‌.ಡಿ.ದೇವೇಗೌಡರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿಯ ಬಗ್ಗೆ ಹೇಳುವುದಿಲ್ಲವೇ? ಸಾವರ್ಕರ್‌‌ ಅವರು ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಹೇಳುವುದರ ಹಿಂದೆ ಸಾವರ್ಕರ್‌‌ ಮೇಲಿರುವ ಆರೋಪಕ್ಕೆ ಜನಮನ್ನಣೆ ಸಿಗುವಂತೆ ಮಾಡುವ ಉನ್ನಾರವಿದೆ” ಎಂದು ಪ್ರೊ.ಎಸ್.ಚಂದ್ರಶೇಖರ್‌ ಹೇಳಿದರು.

“ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಹೇಳಿರುವುದಕ್ಕೆ ‘ನಾನುಗೌರಿ.ಕಾಮ್‌’ನೊಂದಿಗೆ ಅವರು ಪ್ರತಿಕ್ರಿಯಿಸಿದರು.

“ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆರ್‌‌ಎಸ್‌ಎಸ್‌ ಹೊಗಳಿದ್ದರು ಎಂದು ಸಚಿವ ಸಿ.ಟಿ.ರವಿ ಹೇಳಿದ್ದರು. ಆ ಮೇಲೆ ದೇವೇಗೌಡರೇ ಸ್ಪಷ್ಟನೆ ನೀಡಿದರು. ಬದುಕಿರುವವರ ಬಗ್ಗೆ ಹೀಗೆ ಹೇಳುವವರು, ತೀರಿಕೊಂಡವರ ಬಗ್ಗೆ ಹೇಳುವುದಿಲ್ಲವೆ?” ಎಂದು ಎಚ್ಚರಿಸಿದರು.

ಪ್ರೊ.ಎಸ್‌.ಚಂದ್ರಶೇಖರ್‌‌

“ದೇವೇಗೌಡರು ಸುಳ್ಳು ಹೇಳಬೇಡಿ ಎಂದು ಹೇಳಿದ್ದಾರೆ. ಆದರೆ ಸುಳ್ಳು ಹೇಳಬೇಡಿ ಎಂದು ಪ್ರತಿಕ್ರಿಯಿಸಲು ಗಾಂಧಿ ಇಲ್ಲವಲ್ಲ. ವ್ಯವಸ್ಥಿತವಾಗಿ ಈ ಥರದ ನೆರೇಟಿವ್‌ಗಳನ್ನು ಬೆಳೆಸಲಾಗುತ್ತದೆ. ಅವರ ಮೇಲೆ ಇರುವ ಆರೋಪಗಳನ್ನು ರಿವರ್ಸ್ ಮಾಡಲು ಈ ಥರ ಹೇಳಿಕೆಗಳನ್ನು ನೀಡುತ್ತಾ ಹೋಗುತ್ತಾರೆ” ಎಂದು ಅಭಿಪ್ರಾಯಪಟ್ಟರು.

“ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿಯವರು ಆರ್‌‌ಎಸ್‌ಎಸ್‌ಗೆ ಹೋಗಿದ್ದರು. -ನೀವು ಅಲ್ಲಿಗೆ ಹೋಗಬೇಡಿ, ನಿಮ್ಮನ್ನು ಬಳಸಿಕೊಳ್ಳುತ್ತಾರೆ- ಎಂದು ಅವರ ಮಗಳು ಎಚ್ಚರಿಸಿದ್ದರು. ಅಲ್ಲಿ ಪ್ರಣವ್‌ ಏನು ಮಾತನಾಡಿದ್ದರು ಎಂಬುದು ಮುಖ್ಯವಾಗುವುದಿಲ್ಲ. ಅಲ್ಲಿಗೆ ಹೋಗಿದ್ದರು ಎಂಬುದಷ್ಟೇ ಮುಖ್ಯವಾಗುತ್ತದೆ. ಈ ಥರದ್ದು ರಾಜಕಾರಣದಲ್ಲಿ ನಡೆಯುತ್ತಿರುತ್ತದೆ. ಅದು ಆಶ್ಚರ್ಯವೇನಲ್ಲ” ಎಂದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

“ಆರ್‌‌ಎಸ್‌‌ಎಸ್‌ ಮೂಲವನ್ನು ಬಿಟ್ಟು ಗಾಂಧೀಜಿಗೆ ಹತ್ತಿರವಿದ್ದ ಯಾರಾದರೂ ಈ ಬಗ್ಗೆ ದಾಖಲಿಸಿದ್ದಾರಾ ಎಂದು ಕೇಳಬೇಕಾಗುತ್ತದೆ. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರು ಗಾಂಧಿಗೆ ಹತ್ತಿರವಿದ್ದರು. ಜವಹರಲಾಲ್‌ ನೆಹರೂ ಅವರಿದ್ದರು. ಇವರ್‍ಯಾರಾದರೂ ಹೇಳಿದ್ದರೆ ದಾಖಲೆ ಇದ್ದರೆ ತಿಳಿಸಬೇಕು” ಎಂದು ಆಗ್ರಹಿಸಿದರು.

“ರಕ್ಷಣಾ ಸಚಿವರೇ ಹೀಗೆ ಹೇಳಿದ್ದರು ಎಂದು ಮತ್ತೊಬ್ಬ ಹೇಳಲು ಶುರು ಮಾಡುತ್ತಾನೆ. ಹೀಗೆ ಒಬ್ಬರಿಂದ ಒಬ್ಬರಿಗೆ ಸುಳ್ಳು ಹರಡುತ್ತಾ ಹೋಗುತ್ತದೆ. ಈ ಥರದಲ್ಲಿ ಸುಳ್ಳುಗಳ ಪ್ರತಿಪಾದನೆ ಬೆಳೆಯುತ್ತಾ ಹೋಗುತ್ತದೆ. ಈ ಹೊತ್ತಿನ ರಾಜಕಾರಣ, ಅಡ್ಡ ದಾರಿಯ ರಾಜಕಾರಣ. ಯಾರ ಬಾಯಲ್ಲಿ ಏನು ಬೇಕಾದರೂ ತುರುಕುತ್ತಾರೆ” ಎಂದು ಟೀಕಿಸಿದರು.

ಪತ್ರಕರ್ತರಾದ ಸ್ವಾತಿ ಚತುರ್ವೇದಿಯವರು ಟ್ವೀಟ್‌ ಮಾಡಿದ್ದು, ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಬರೆದಿರುವ ಪತ್ರದ ಕುರಿತು ಹಂಚಿಕೊಂಡಿದ್ದಾರೆ. ಆದರೆ ಕ್ಷಮಾಪಣೆ ಕೇಳುವಂತೆ ಗಾಂಧೀಜಿಯವರು ಈ ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷಣ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದು ಕುಟುಕಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬವರು ಟ್ಟೀಟ್‌ ಮಾಡಿದ್ದಾರೆ.

“ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

“ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...