Homeಮುಖಪುಟ"ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?"

“ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸಾವರ್ಕರ್‌‌ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ರಾಜನಾಥ್‌ಸಿಂಗ್‌ ಹೇಳಿರುವುದಕ್ಕೆ ಇತಿಹಾಸತಜ್ಞ ಪ್ರೊ.ಎಸ್‌.ಚಂದ್ರಶೇಖರ್ ಪ್ರತಿಕ್ರಿಯೆ

- Advertisement -
- Advertisement -

“ಬದುಕಿರುವ ಎಚ್‌.ಡಿ.ದೇವೇಗೌಡರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿಯ ಬಗ್ಗೆ ಹೇಳುವುದಿಲ್ಲವೇ? ಸಾವರ್ಕರ್‌‌ ಅವರು ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಹೇಳುವುದರ ಹಿಂದೆ ಸಾವರ್ಕರ್‌‌ ಮೇಲಿರುವ ಆರೋಪಕ್ಕೆ ಜನಮನ್ನಣೆ ಸಿಗುವಂತೆ ಮಾಡುವ ಉನ್ನಾರವಿದೆ” ಎಂದು ಪ್ರೊ.ಎಸ್.ಚಂದ್ರಶೇಖರ್‌ ಹೇಳಿದರು.

“ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಹೇಳಿರುವುದಕ್ಕೆ ‘ನಾನುಗೌರಿ.ಕಾಮ್‌’ನೊಂದಿಗೆ ಅವರು ಪ್ರತಿಕ್ರಿಯಿಸಿದರು.

“ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆರ್‌‌ಎಸ್‌ಎಸ್‌ ಹೊಗಳಿದ್ದರು ಎಂದು ಸಚಿವ ಸಿ.ಟಿ.ರವಿ ಹೇಳಿದ್ದರು. ಆ ಮೇಲೆ ದೇವೇಗೌಡರೇ ಸ್ಪಷ್ಟನೆ ನೀಡಿದರು. ಬದುಕಿರುವವರ ಬಗ್ಗೆ ಹೀಗೆ ಹೇಳುವವರು, ತೀರಿಕೊಂಡವರ ಬಗ್ಗೆ ಹೇಳುವುದಿಲ್ಲವೆ?” ಎಂದು ಎಚ್ಚರಿಸಿದರು.

ಪ್ರೊ.ಎಸ್‌.ಚಂದ್ರಶೇಖರ್‌‌

“ದೇವೇಗೌಡರು ಸುಳ್ಳು ಹೇಳಬೇಡಿ ಎಂದು ಹೇಳಿದ್ದಾರೆ. ಆದರೆ ಸುಳ್ಳು ಹೇಳಬೇಡಿ ಎಂದು ಪ್ರತಿಕ್ರಿಯಿಸಲು ಗಾಂಧಿ ಇಲ್ಲವಲ್ಲ. ವ್ಯವಸ್ಥಿತವಾಗಿ ಈ ಥರದ ನೆರೇಟಿವ್‌ಗಳನ್ನು ಬೆಳೆಸಲಾಗುತ್ತದೆ. ಅವರ ಮೇಲೆ ಇರುವ ಆರೋಪಗಳನ್ನು ರಿವರ್ಸ್ ಮಾಡಲು ಈ ಥರ ಹೇಳಿಕೆಗಳನ್ನು ನೀಡುತ್ತಾ ಹೋಗುತ್ತಾರೆ” ಎಂದು ಅಭಿಪ್ರಾಯಪಟ್ಟರು.

“ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿಯವರು ಆರ್‌‌ಎಸ್‌ಎಸ್‌ಗೆ ಹೋಗಿದ್ದರು. -ನೀವು ಅಲ್ಲಿಗೆ ಹೋಗಬೇಡಿ, ನಿಮ್ಮನ್ನು ಬಳಸಿಕೊಳ್ಳುತ್ತಾರೆ- ಎಂದು ಅವರ ಮಗಳು ಎಚ್ಚರಿಸಿದ್ದರು. ಅಲ್ಲಿ ಪ್ರಣವ್‌ ಏನು ಮಾತನಾಡಿದ್ದರು ಎಂಬುದು ಮುಖ್ಯವಾಗುವುದಿಲ್ಲ. ಅಲ್ಲಿಗೆ ಹೋಗಿದ್ದರು ಎಂಬುದಷ್ಟೇ ಮುಖ್ಯವಾಗುತ್ತದೆ. ಈ ಥರದ್ದು ರಾಜಕಾರಣದಲ್ಲಿ ನಡೆಯುತ್ತಿರುತ್ತದೆ. ಅದು ಆಶ್ಚರ್ಯವೇನಲ್ಲ” ಎಂದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

“ಆರ್‌‌ಎಸ್‌‌ಎಸ್‌ ಮೂಲವನ್ನು ಬಿಟ್ಟು ಗಾಂಧೀಜಿಗೆ ಹತ್ತಿರವಿದ್ದ ಯಾರಾದರೂ ಈ ಬಗ್ಗೆ ದಾಖಲಿಸಿದ್ದಾರಾ ಎಂದು ಕೇಳಬೇಕಾಗುತ್ತದೆ. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರು ಗಾಂಧಿಗೆ ಹತ್ತಿರವಿದ್ದರು. ಜವಹರಲಾಲ್‌ ನೆಹರೂ ಅವರಿದ್ದರು. ಇವರ್‍ಯಾರಾದರೂ ಹೇಳಿದ್ದರೆ ದಾಖಲೆ ಇದ್ದರೆ ತಿಳಿಸಬೇಕು” ಎಂದು ಆಗ್ರಹಿಸಿದರು.

“ರಕ್ಷಣಾ ಸಚಿವರೇ ಹೀಗೆ ಹೇಳಿದ್ದರು ಎಂದು ಮತ್ತೊಬ್ಬ ಹೇಳಲು ಶುರು ಮಾಡುತ್ತಾನೆ. ಹೀಗೆ ಒಬ್ಬರಿಂದ ಒಬ್ಬರಿಗೆ ಸುಳ್ಳು ಹರಡುತ್ತಾ ಹೋಗುತ್ತದೆ. ಈ ಥರದಲ್ಲಿ ಸುಳ್ಳುಗಳ ಪ್ರತಿಪಾದನೆ ಬೆಳೆಯುತ್ತಾ ಹೋಗುತ್ತದೆ. ಈ ಹೊತ್ತಿನ ರಾಜಕಾರಣ, ಅಡ್ಡ ದಾರಿಯ ರಾಜಕಾರಣ. ಯಾರ ಬಾಯಲ್ಲಿ ಏನು ಬೇಕಾದರೂ ತುರುಕುತ್ತಾರೆ” ಎಂದು ಟೀಕಿಸಿದರು.

ಪತ್ರಕರ್ತರಾದ ಸ್ವಾತಿ ಚತುರ್ವೇದಿಯವರು ಟ್ವೀಟ್‌ ಮಾಡಿದ್ದು, ಗಾಂಧೀಜಿಯವರು ಸಾವರ್ಕರ್‌ ಅವರಿಗೆ ಬರೆದಿರುವ ಪತ್ರದ ಕುರಿತು ಹಂಚಿಕೊಂಡಿದ್ದಾರೆ. ಆದರೆ ಕ್ಷಮಾಪಣೆ ಕೇಳುವಂತೆ ಗಾಂಧೀಜಿಯವರು ಈ ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷಣ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದು ಕುಟುಕಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬವರು ಟ್ಟೀಟ್‌ ಮಾಡಿದ್ದಾರೆ.

“ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

“ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...