HomeಮುಖಪುಟBJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

- Advertisement -
- Advertisement -

ಶುಕ್ರವಾರ ರೈತರಿಂದ ಸುತ್ತುವರೆಯಲ್ಪಟ್ಟ ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಅವರನ್ನು ಇನ್ನೂ ವಿರೋಧಿಸುವವರ ಕಣ್ಣುಗಳನ್ನು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು ಎಂದು ಹರಿಯಾಣ ಬಿಜೆಪಿ ಸಂಸದ ಅರವಿಂದ್ ಶರ್ಮಾ ಶನಿವಾರ ರೈತರಿಗೆ ಬೆದರಿಕೆ ಹಾಕಿದ್ದಾರೆ.

ಅರವಿಂದ್‌ ಶರ್ಮಾ ಇದನ್ನು ಸಾರ್ವಜನಿಕವಾಗಿಯೆ ಹೇಳಿದ್ದು, ಅವರ ಭಯಾನಕ ಹೇಳಿಕೆಗೆ ಪ್ರೇಕ್ಷಕರು ಹರ್ಷೋದ್ಗಾರ ಮಾಡಿ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ ವಿರುದ್ದವು ಆಕ್ರೋಶ ವ್ಯಕ್ತಪಡಿಸಿದ ಅರವಿಂದ್‌, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕಾಗಿ ಇನ್ನೂ 25 ವರ್ಷಗಳ ಕಾಲ ಅಲೆದಾಡಬೇಕು ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಅರವಿಂದ್‌ ಶರ್ಮಾ ಕಾಂಗ್ರೆಸ್‌‌ನ ಮಾಜಿ ನಾಯಕನಾಗಿದ್ದು 2019 ರಲ್ಲಿ ಬಿಜೆಪಿ ಸೇರಿದ್ದರು. ಅವರು ಇದೀಗ ರೋಹ್ಟಕ್‌ನ ಬಿಜೆಪಿ ಸಂಸದರಾಗಿದ್ದಾರೆ.

‘‘ರೈತರ ಆಂದೋಲನದ ನೆಪದಲ್ಲಿ ನಿರುದ್ಯೋಗಿ ಮದ್ಯವ್ಯಸನಿಗಳು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ’’ ಎಂದು ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ರಾಜ್ಯದ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದೊಳಗೆ ಮನೀಶ್‌ ಗ್ರೋವರ್‌ ಅವರನ್ನು ರೈತರು ಘೇರಾವ್‌ ಮಾಡಿದ್ದರು.

ರೈತರ ಘೆರಾವ್‌ನಿಂದಾಗಿ ಮನೀಶ್‌ ಗ್ರೋವರ್‌ ಮತ್ತು ಬಿಜೆಪಿಯ ಇತರ ನಾಯಕರು ಸುಮಾರು ಎಂಟು ಗಂಟೆಗಳ ಕಾಲ ದೇವಾಲಯದೊಳಗೆ ಸಿಲುಕಿಕೊಂಡಿದ್ದರು. ನಂತರ ಮನೀಶ್‌ ಗ್ರೋವರ್ ಕೈ ಮುಗಿದು ಕ್ಷಮೆ ಕೇಳಿದ ನಂತರ ಅವರನ್ನು ಹೊರ ಹೋಗಲು ಅವಕಾಶ ನೀಡಲಾಯಿತು.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

ಆದರೆ ಅಲ್ಲಿಂದ ಹೊರ ಬಂದ ನಂತರ ತಾನು ಕ್ಷಮೆ ಯಾಚನೆ ಮಾಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ನನ್ನೊಂದಿಗೆ ಎಲ್ಲರತ್ತ ಕೈ ಬೀಸುವಂತೆ ಕೇಳಲಾಗಿದೆ. ನಾವು ಕ್ಷಮೆ ಕೇಳಿಲ್ಲ… ಈ ದೇವಸ್ಥಾನಕ್ಕೆ ಯಾವಾಗ ಬೇಕಾದರೂ ಬರುತ್ತೇನೆ’’ ಎಂದು ಹೇಳಿದ್ದಾರೆ.

ರೈತರು ದೇವಸ್ಧಾನದ ಎಲ್ಲಾ ಕಡೆಯಿಂದ ಸುತ್ತುವರಿಯುವಂತೆ ಜನರನ್ನು ಕೇಳಿಕೊಂಡಿಂದ್ದರು.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಘಟನೆಯ ಹಿನ್ನಲೆಯಲ್ಲಿ ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...