HomeಮುಖಪುಟBJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

- Advertisement -
- Advertisement -

ಶುಕ್ರವಾರ ರೈತರಿಂದ ಸುತ್ತುವರೆಯಲ್ಪಟ್ಟ ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಅವರನ್ನು ಇನ್ನೂ ವಿರೋಧಿಸುವವರ ಕಣ್ಣುಗಳನ್ನು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು ಎಂದು ಹರಿಯಾಣ ಬಿಜೆಪಿ ಸಂಸದ ಅರವಿಂದ್ ಶರ್ಮಾ ಶನಿವಾರ ರೈತರಿಗೆ ಬೆದರಿಕೆ ಹಾಕಿದ್ದಾರೆ.

ಅರವಿಂದ್‌ ಶರ್ಮಾ ಇದನ್ನು ಸಾರ್ವಜನಿಕವಾಗಿಯೆ ಹೇಳಿದ್ದು, ಅವರ ಭಯಾನಕ ಹೇಳಿಕೆಗೆ ಪ್ರೇಕ್ಷಕರು ಹರ್ಷೋದ್ಗಾರ ಮಾಡಿ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ ವಿರುದ್ದವು ಆಕ್ರೋಶ ವ್ಯಕ್ತಪಡಿಸಿದ ಅರವಿಂದ್‌, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕಾಗಿ ಇನ್ನೂ 25 ವರ್ಷಗಳ ಕಾಲ ಅಲೆದಾಡಬೇಕು ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಅರವಿಂದ್‌ ಶರ್ಮಾ ಕಾಂಗ್ರೆಸ್‌‌ನ ಮಾಜಿ ನಾಯಕನಾಗಿದ್ದು 2019 ರಲ್ಲಿ ಬಿಜೆಪಿ ಸೇರಿದ್ದರು. ಅವರು ಇದೀಗ ರೋಹ್ಟಕ್‌ನ ಬಿಜೆಪಿ ಸಂಸದರಾಗಿದ್ದಾರೆ.

‘‘ರೈತರ ಆಂದೋಲನದ ನೆಪದಲ್ಲಿ ನಿರುದ್ಯೋಗಿ ಮದ್ಯವ್ಯಸನಿಗಳು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ’’ ಎಂದು ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ರಾಜ್ಯದ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದೊಳಗೆ ಮನೀಶ್‌ ಗ್ರೋವರ್‌ ಅವರನ್ನು ರೈತರು ಘೇರಾವ್‌ ಮಾಡಿದ್ದರು.

ರೈತರ ಘೆರಾವ್‌ನಿಂದಾಗಿ ಮನೀಶ್‌ ಗ್ರೋವರ್‌ ಮತ್ತು ಬಿಜೆಪಿಯ ಇತರ ನಾಯಕರು ಸುಮಾರು ಎಂಟು ಗಂಟೆಗಳ ಕಾಲ ದೇವಾಲಯದೊಳಗೆ ಸಿಲುಕಿಕೊಂಡಿದ್ದರು. ನಂತರ ಮನೀಶ್‌ ಗ್ರೋವರ್ ಕೈ ಮುಗಿದು ಕ್ಷಮೆ ಕೇಳಿದ ನಂತರ ಅವರನ್ನು ಹೊರ ಹೋಗಲು ಅವಕಾಶ ನೀಡಲಾಯಿತು.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

ಆದರೆ ಅಲ್ಲಿಂದ ಹೊರ ಬಂದ ನಂತರ ತಾನು ಕ್ಷಮೆ ಯಾಚನೆ ಮಾಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ನನ್ನೊಂದಿಗೆ ಎಲ್ಲರತ್ತ ಕೈ ಬೀಸುವಂತೆ ಕೇಳಲಾಗಿದೆ. ನಾವು ಕ್ಷಮೆ ಕೇಳಿಲ್ಲ… ಈ ದೇವಸ್ಥಾನಕ್ಕೆ ಯಾವಾಗ ಬೇಕಾದರೂ ಬರುತ್ತೇನೆ’’ ಎಂದು ಹೇಳಿದ್ದಾರೆ.

ರೈತರು ದೇವಸ್ಧಾನದ ಎಲ್ಲಾ ಕಡೆಯಿಂದ ಸುತ್ತುವರಿಯುವಂತೆ ಜನರನ್ನು ಕೇಳಿಕೊಂಡಿಂದ್ದರು.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಘಟನೆಯ ಹಿನ್ನಲೆಯಲ್ಲಿ ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...