Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

- Advertisement -
- Advertisement -

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗೃತ ಕರ್ನಾಟಕ ಸಂಚಾಲಕರಾದ ಎನ್.ನಾಗೇಶ್ ಹಾಗೂ ಪೃಥ್ವಿರಾಜ್, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದು ಕೂಡ ವಾಸ್ತವವೇ. ಅದಕ್ಕಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು, ಆದರೆ ಇಂತಹ ಸಮೀಕ್ಷೆಗೆ ಕೆಲವರು ಅಡ್ಡಗಾಲು ಹಾಕುತ್ತಿರುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ” ಎಂದು ಖಂಡಿಸಿದರು.

“ಸವೋಚ್ಚ ನ್ಯಾಯಾಲಯವು (ಮಂಡಲ್ ಕೇಸಿನಲ್ಲಿ) ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು ಈ ಆಯೋಗಗಳು 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿವೆ. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ. ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದರು.

“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂಥ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಇದರಿಂದ ಹಿಂದುಳಿದಿರುವ ಎಲ್ಲ ಜಾತಿ-ಉಪಜಾತಿಗಳಿಗೆ ಲಾಭ ಇದೆ. ಹಾಗಾಗಿ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಜಾತಿ ಸಮೀಕ್ಷೆ ನಡೆಸುವುದೇ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು. ಆದುದರಿಂದ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರು. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ. ಇದರ ಬಗ್ಗೆ ಎಲ್ಲ ಹಿಂದುಳಿದ ಜಾತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ” ಎಂದರು.

“ಇದೇ ವೇಳೆ, ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರ್ಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದು ಸಲಹೆ ನೀಡಿದರು.

“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಮಂಡ್ಯ ಘಟಕದ ಸಂಚಾಲಕರಾದ ಸಂತೋಷ್ ಜಿ, ನಗರಕೆರೆ ಜಗದೀಶ್,  ಸುಬ್ರಮಣ್ಯ ಹಾಗೂ ಪ್ರಶಾಂತ್ ಭಾಗವಹಿಸಿದ್ದರು.

14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...