Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

- Advertisement -
- Advertisement -

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗೃತ ಕರ್ನಾಟಕ ಸಂಚಾಲಕರಾದ ಎನ್.ನಾಗೇಶ್ ಹಾಗೂ ಪೃಥ್ವಿರಾಜ್, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದು ಕೂಡ ವಾಸ್ತವವೇ. ಅದಕ್ಕಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು, ಆದರೆ ಇಂತಹ ಸಮೀಕ್ಷೆಗೆ ಕೆಲವರು ಅಡ್ಡಗಾಲು ಹಾಕುತ್ತಿರುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ” ಎಂದು ಖಂಡಿಸಿದರು.

“ಸವೋಚ್ಚ ನ್ಯಾಯಾಲಯವು (ಮಂಡಲ್ ಕೇಸಿನಲ್ಲಿ) ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು ಈ ಆಯೋಗಗಳು 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿವೆ. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ. ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದರು.

“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂಥ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಇದರಿಂದ ಹಿಂದುಳಿದಿರುವ ಎಲ್ಲ ಜಾತಿ-ಉಪಜಾತಿಗಳಿಗೆ ಲಾಭ ಇದೆ. ಹಾಗಾಗಿ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಜಾತಿ ಸಮೀಕ್ಷೆ ನಡೆಸುವುದೇ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು. ಆದುದರಿಂದ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರು. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ. ಇದರ ಬಗ್ಗೆ ಎಲ್ಲ ಹಿಂದುಳಿದ ಜಾತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ” ಎಂದರು.

“ಇದೇ ವೇಳೆ, ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರ್ಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದು ಸಲಹೆ ನೀಡಿದರು.

“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಮಂಡ್ಯ ಘಟಕದ ಸಂಚಾಲಕರಾದ ಸಂತೋಷ್ ಜಿ, ನಗರಕೆರೆ ಜಗದೀಶ್,  ಸುಬ್ರಮಣ್ಯ ಹಾಗೂ ಪ್ರಶಾಂತ್ ಭಾಗವಹಿಸಿದ್ದರು.

14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...