Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

- Advertisement -
- Advertisement -

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗೃತ ಕರ್ನಾಟಕ ಸಂಚಾಲಕರಾದ ಎನ್.ನಾಗೇಶ್ ಹಾಗೂ ಪೃಥ್ವಿರಾಜ್, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದು ಕೂಡ ವಾಸ್ತವವೇ. ಅದಕ್ಕಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು, ಆದರೆ ಇಂತಹ ಸಮೀಕ್ಷೆಗೆ ಕೆಲವರು ಅಡ್ಡಗಾಲು ಹಾಕುತ್ತಿರುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ” ಎಂದು ಖಂಡಿಸಿದರು.

“ಸವೋಚ್ಚ ನ್ಯಾಯಾಲಯವು (ಮಂಡಲ್ ಕೇಸಿನಲ್ಲಿ) ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು ಈ ಆಯೋಗಗಳು 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿವೆ. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ. ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದರು.

“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂಥ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಇದರಿಂದ ಹಿಂದುಳಿದಿರುವ ಎಲ್ಲ ಜಾತಿ-ಉಪಜಾತಿಗಳಿಗೆ ಲಾಭ ಇದೆ. ಹಾಗಾಗಿ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಜಾತಿ ಸಮೀಕ್ಷೆ ನಡೆಸುವುದೇ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು. ಆದುದರಿಂದ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರು. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ. ಇದರ ಬಗ್ಗೆ ಎಲ್ಲ ಹಿಂದುಳಿದ ಜಾತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ” ಎಂದರು.

“ಇದೇ ವೇಳೆ, ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರ್ಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದು ಸಲಹೆ ನೀಡಿದರು.

“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಮಂಡ್ಯ ಘಟಕದ ಸಂಚಾಲಕರಾದ ಸಂತೋಷ್ ಜಿ, ನಗರಕೆರೆ ಜಗದೀಶ್,  ಸುಬ್ರಮಣ್ಯ ಹಾಗೂ ಪ್ರಶಾಂತ್ ಭಾಗವಹಿಸಿದ್ದರು.

14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...