Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

- Advertisement -
- Advertisement -

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು ಜಾಗೃತ ಕರ್ನಾಟಕ ಮಂಡ್ಯ ಜಿಲ್ಲಾ ಘಟಕ ಕಿಡಿಕಾರಿದೆ.

ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗೃತ ಕರ್ನಾಟಕ ಸಂಚಾಲಕರಾದ ಎನ್.ನಾಗೇಶ್ ಹಾಗೂ ಪೃಥ್ವಿರಾಜ್, “ಭಾರತದಲ್ಲಿ ಜಾತಿ ವ್ಯವಸ್ಥೆ ವಾಸ್ತವ. ಅದೇ ರೀತಿ ಕೆಲವೇ ಕೆಲವು ಜಾತಿಗಳು ಮುಂದುವರೆದಿರುವುದು ಮತ್ತು ಹಲವು ಜಾತಿಗಳು ಹಿಂದುಳಿದಿರುವುದು ಕೂಡ ವಾಸ್ತವವೇ. ಅದಕ್ಕಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು, ಆದರೆ ಇಂತಹ ಸಮೀಕ್ಷೆಗೆ ಕೆಲವರು ಅಡ್ಡಗಾಲು ಹಾಕುತ್ತಿರುವುದು ಸಾಮಾಜಿಕ ನ್ಯಾಯದ ವಿರೋಧಿ ನಡೆಯಾಗಿದೆ” ಎಂದು ಖಂಡಿಸಿದರು.

“ಸವೋಚ್ಚ ನ್ಯಾಯಾಲಯವು (ಮಂಡಲ್ ಕೇಸಿನಲ್ಲಿ) ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. ಆನಂತರ ಬಂದ ಕಾಯ್ದೆಗಳು ಈ ಆಯೋಗಗಳು 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿವೆ. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ನ್ಯಾಯಯುತವಾದುದಾಗಿದೆ. ಯಾರೂ ಕೂಡ ಜಾತಿ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದರು.

“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಹಿಂದುಳಿದಿರುವ ಜಾತಿಗಳನ್ನು ಗುರುತಿಸಿ ಅವುಗಳ ಬೆಳವಣಿಗೆಗೆ ಅನುಕೂಲವಾಗುವಂಥ ಶಿಫಾರಸುಗಳನ್ನು ಮಾಡುವುದರಿಂದ ಸಹಜವಾಗಿ ಇದರಿಂದ ಹಿಂದುಳಿದಿರುವ ಎಲ್ಲ ಜಾತಿ-ಉಪಜಾತಿಗಳಿಗೆ ಲಾಭ ಇದೆ. ಹಾಗಾಗಿ, ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಗೂ ಮರೆಯುವುದಿಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಜಾತಿ ಸಮೀಕ್ಷೆ ನಡೆಸುವುದೇ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು. ಆದುದರಿಂದ ಜಾತಿ ಸಮೀಕ್ಷೆಗೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ವಿರೋಧಿಗಳು. ನಮ್ಮ ಮತಗಳನ್ನು ತೆಗೆದುಕೊಂಡು ಅಧಿಕಾರ ಪಡೆದು ನಮ್ಮ ವಿರುದ್ಧ ಮಸಲತ್ತು ನಡೆಸುತ್ತಿರುವ ಖಳನಾಯಕರು. ಇಂಥ ಸಮುದಾಯ ಮತ್ತು ನಾಯಕರ ವಿರುದ್ಧ ಹಿಂದುಳಿದ ಸಮುದಾಯಗಳು ಒಗ್ಗಟ್ಟಾಗುತ್ತಿವೆ. ಇದರ ಬಗ್ಗೆ ಎಲ್ಲ ಹಿಂದುಳಿದ ಜಾತಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ” ಎಂದರು.

“ಇದೇ ವೇಳೆ, ಕರ್ನಾಟಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಮೀಕ್ಷೆ ವೇಳೆ ಆಗುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ಕೂಡಲೇ ಬಗೆಹರಿಸಬೇಕು. ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದು ಎಷ್ಟು ಮುಖ್ಯವೋ ಅದನ್ನು ಸಮರ್ಪಕವಾಗಿ ನಡೆಸುವುದು ಕೂಡಾ ಅಷ್ಟೇ ಮುಖ್ಯ. 2015ರ ಸಮೀಕ್ಷೆ ಬಗ್ಗೆ ಆಕ್ಷೇಪಗಳು ಬಂದು ಕಡೆಗೆ ಸರ್ಕಾರ ಅದನ್ನು ಅಂಗೀಕರಿಸದಿರುವುದು ದುರ್ಬಲ ಸಮುದಾಯಗಳಿಗೆ ಆದ ದೊಡ್ಡ ಅನ್ಯಾಯ. ಮತ್ತೊಮ್ಮೆ ಅಂಥ ಮಹದನ್ಯಾಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಆಯೋಗದ ಮೇಲಿದೆ” ಎಂದು ಸಲಹೆ ನೀಡಿದರು.

“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಮಂಡ್ಯ ಘಟಕದ ಸಂಚಾಲಕರಾದ ಸಂತೋಷ್ ಜಿ, ನಗರಕೆರೆ ಜಗದೀಶ್,  ಸುಬ್ರಮಣ್ಯ ಹಾಗೂ ಪ್ರಶಾಂತ್ ಭಾಗವಹಿಸಿದ್ದರು.

14 ಮಕ್ಕಳ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಧ್ಯಪ್ರದೇಶ ಸರ್ಕಾರ; ವೈದ್ಯನ ಬಂಧನ, ಸಿರಪ್ ತಯಾರಕರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...