Homeಕರ್ನಾಟಕಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ...

ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ ಗರಂ

- Advertisement -
- Advertisement -

ನಾವು ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕುಮಾರಕೃಪಾ ಅತಿಥಿಗೃಹದ ಬಳಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ನೀಡಿದರು.

”ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದರು.

ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ಬಹಳ ಸಂತೋಷ… ಪ್ರತಿಭಟನೆ ಮಾಡಬೇಕು… ನಾವು ಅವರನ್ನು ತಡೆಯುವುದಿಲ್ಲ. ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಹೇಳಿದ್ದೇನೆ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ” ಎಂದರು.

”ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಗೋದಾಮಿನಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರು ಬಡವರಿಗೆ ನೀಡದೆ ರಾಜಕಾರಣ ಮಾಡುತ್ತಿದ್ದಾರೆ. ಇದೆಲ್ಲವೂ ಜನರಿಗೆ ಗೊತ್ತಿದೆ” ಎಂದು ಹೇಳಿದರು.

”ನಾವು ದೀರ್ಘಾವಧಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಿಗದಿ ಮಾಡಿರುವ ಮೊತ್ತಕ್ಕೆ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಕ್ಕಿ ಬೆಳೆದು ಈ ಮೊತ್ತಕ್ಕೆ ನೀಡಿದರೆ ಅವರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ. ನಮಗೆ ಕೆಲ ರಾಜ್ಯದವರು ಒಂದೆರಡು ತಿಂಗಳು ಅಕ್ಕಿ ಪೂರೈಸಲು ಮುಂದಾಗಿದ್ದರು. ನಮಗೆ ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಬೇಕು. ನಾವು ಆರಂಭದಲ್ಲಿ ಅಕ್ಕಿ ನೀಡಿ ನಂತರ ಅದನ್ನು ನಿಲ್ಲಿಸುವಂತೆ ಆಗಬಾರದು. ಹೀಗಾಗಿ ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ಈಗ ಹಣ ನೀಡಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿ, ”ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ” ಎಂದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...