Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...