Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...