Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...