Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...