Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...