Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...