Homeಮುಖಪುಟಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯದ ರೈತರ ಪರ ನಿಲ್ಲುತ್ತಿದ್ದವರು ಇಂದು ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದಾರೆ: ಚೆಲುವರಾಯಸ್ವಾಮಿ ವಾಗ್ದಾಳಿ

- Advertisement -
- Advertisement -

‘ಸಂಪೂರ್ಣವಾಗಿ ಹಸಿರು ಶಾಲು ಧರಿಸಿ, ಮಂಡ್ಯದ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಕೆರಗೋಡು ಗ್ರಾಮದ ಹನುಮಧ್ವಜ ತೆರವು ವಿರೋಧಿಸಿ ಬಿಜೆಪಿ-ಜೆಡಿಎಸ್ ಮುಖಂಡರು ನಿನ್ನೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಜಿಲ್ಲೆಯ ಜೆಡಿಎಸ್ ನಾಯಕರು ಕೇಸರಿ ಶಾಲು ಧರಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಧ್ವಜ ವಿವಾದದ ಬಗ್ಗೆ ಇಂದು ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಚೆಲುವರಾಯಸ್ವಾಮಿ, ಕಮಲ-ದಳ ನಾಯಕರ ವಿರುದ್ಧ ಕಿಡಿಕಾರಿದರು.

‘ಬಿ.ಎಂ. ಶ್ರೀಕಂಠಯ್ಯ, ಪು.ತಿ. ನರಸಿಂಹಾಚಾರ್, ಎಚ್.ಎಲ್. ನಾಗೇಗೌಡ, ಬೆಸಗರಹಳ್ಳಿ ರಾಮಣ್ಣ, ಎಚ್.ಎಲ್. ಕೇಶವಮೂರ್ತಿ ಸೇರಿದಂತೆ ಹಲವು ಸಾಹಿತಿಗಳು ಮಂಡ್ಯಕ್ಕೆ ಹೆಸರು ತಂದಿದ್ದಾರೆ. ರಾಷ್ಟ್ರಕವಿ ಕುವೆಂಪು ಮಾರ್ಗದರ್ಶನದಲ್ಲಿ ಅವರ ಆಶಯಗಳನ್ನು ಇಲ್ಲಿನ ಜನರು ಪಾಲಿಸುತ್ತಿದ್ದಾರೆ. ಸ್ವಾಭಿಮಾನ ಮತ್ತು ಗೌರವ ವಿಚಾರದಲ್ಲಿ ಮಂಡ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ದಯವಿಟ್ಟು ಇಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಬೇಡಿ’ ಎಂದು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

‘ನಿಮ್ಮ ಪಕ್ಷವನ್ನು ಜಯಪ್ರಕಾಶ್ ನಾರಾಯಣ್ ಸ್ಥಾಪಿಸಿದರು; ಕರ್ನಾಟಕದಲ್ಲಿ ನಿನ್ನೆಗೆ ಅದನ್ನು ನೀವು ಅಂತಿಮಗೊಳಿಸಿದ್ದೀರ. ಎಚ್.ಡಿ. ದೇವೇಗೌಡ, ಎಸ್‌.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಸೇರಿದಂತೆ ಸಾವಿರಾರು ಜನ ಪ್ರಾದೇಶಿಕ ಪಕ್ಷವನ್ನು ಉಳಿಸಿ ಬೆಳಿಸಿದ್ದರು. ಅಂತಿಮವಾಗಿ ನಿನ್ನೆ ನೀವು ಕೇಸರಿ ಶಾಲು ಧರಿಸುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ತಿಲಾಂಜಲಿ ಇಟ್ಟಿದ್ದೀರ’ ಎಂದು ವಾಗ್ದಾಳಿ ನಡೆಸಿದರು.

‘ನೀವು ನೇರವಾಗಿ ಬಿಜೆಪಿ ಸೇರಿದ್ದರೆ ಜನತಾ ಪರಿವಾರವನ್ನು ಕಟ್ಟಿದ್ದವರಿಗೆ ನೋವು ಆಗುತ್ತಿರಲಿಲ್ಲ. ಬೇರೆ ಯಾರಾದರೂ ಆ ಪಕ್ಷವನ್ನು ಮುನ್ನಡೆಸುತ್ತಿದ್ದರು; ಆಗ ಹಿರಿಯರ ಆತ್ಮಕ್ಕೆ ನೋವು ಆಗುತ್ತಿರಲಿಲ್ಲ. ಆದರೆ, ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ಜೆಪಿ ಅವರ ಹೋರಾಟವನ್ನು ನಿನ್ನೆ ಮಂಡ್ಯದಲ್ಲಿ ಮುಗಿಸಿದ್ದೀರ. ಇಲ್ಲೀವರೆಗೆ ಮಂಡ್ಯಲಲ್ಲಿ ಕಾಂಗ್ರೆಸ್-ಜೆಡಿಎಸ್ ಮಾತ್ರ ಇತ್ತು. ಸಂಪೂರ್ಣವಾಗಿ ಹಸಿರು ಶಾಲು ಧರಿಸುತ್ತಿದ್ದವರು, ದೇವೇಗೌಡರ ನೇತೃತ್ವದಲ್ಲಿ ರೈತರ ಪರವಾಗಿ ನಿಲ್ಲುತ್ತಿದ್ದವರು ಇಂದು ಕೇಸರಿ ಶಾಲು ಧರಿಸಿ, ರಾಷ್ಟ್ರಧ್ವಜದ ವಿರುದ್ಧ ನಿಂತಿದ್ದೀರ. ರಾಷ್ಟ್ರ ಧ್ವಜವನ್ನು ಕೆಳಗಿಳಿಸಬೇಕು ಎಂಬುದು ನಿಮ್ಮ ಬೇಡಿಕೆಯಾ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಸರ್ಕಾರ ಹಾಗೂ ಜಿಲ್ಲಾಡಳಿತ ಕೆರಗೋಡಿನಲ್ಲಿ ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದೆ. ನಿಮ್ಮ ಹೋರಾಟ ಯಾವುದರ ಪರವಾಗಿ? ನೀವು ಯಾವುದಕ್ಕಾಗಿ ಹೋರಾಟ ಮಾಡುತ್ತಿದ್ದೀರಾ ಹೇಳಿ. ನಿಮ್ಮ ಹೋರಾಟ ತ್ರಿವರ್ಣ ಧ್ವಜವನ್ನು ಕೆಳಗಿಳಿಸುವಂತೆ ಬೇಡಿಕೆ ಇಟ್ಟಂತೆ ಕಾಣುತ್ತಿದೆ’ ಎಂದು ತಿರುಗೇಟು ಕೊಟ್ಟರು.

‘ಒಬ್ಬ ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿ, ಈ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿ ಆರ್. ಅಶೋಕ್ ಇಂಥ ಹೋರಾಟಕ್ಕೆ ನಾಂದಿ ಹಾಡಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನದ ವಿಚಾರದಲ್ಲಿ ಆಟವಾಡುವುದು ಸರಿಯಲ್ಲ. ನಮ್ಮ ಜಿಲ್ಲೆಯ ಜನರನ್ನು ಹಾಗೂ ಯುವಕರನ್ನು ಪ್ರಚೋದನೆ ಮಾಡಿದ್ದೀರಾ.. ಯುವಕರ ಬದುಕಿನಲ್ಲಿ ಆಟವಾಡುತ್ತಿದ್ದೀರಾ. ಸಿದ್ದರಾಮಯ್ಯ ಹಾಗೂ ನಮ್ಮ ಶಾಸಕ ಫ್ಲೆಕ್ಸ್‌ಗಳಿಗೆ ಕಲ್ಲು ಹೊಡೆದು ಕಿತ್ತು ಹಾಕಿದ್ದೀರ. ಕುರುಬರ ಹಾಸ್ಟೆಸ್‌ಗೆ ಕಲ್ಲು ಹೊಡೆದು, ಸರ್ಕಾರಿ ಬಸ್ಸಿಗೆ ಕಲ್ಲು ಹೊಡೆದಿದ್ದೀರಾ.. ಮಾಜಿ ಮುಖ್ಯಮಂತ್ರಿಗಳಾಗಿ ವ್ಯವಸ್ಥೆಗೆ ನೀವು ಗೌರವ ಕೊಡುವ ರೀತಿ ಇದಾ’ ಎಂದು ಸಚಿವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

‘ನೀವು ಮಂಡ್ಯಕ್ಕೆ ಬಂದಿದ್ದರ ಉದ್ದೇಶ ಆದರೂ ಏನು? ನಾವೇನಾದರೂ ಐದು ವರ್ಷ ಸೋತಾಗ ನಿಮ್ಮ ರೀತಿ ಆಡಿದ್ದೆವಾ? ಈ ಜಿಲ್ಲೆಯಲ್ಲಿ ನಿಮ್ಮ ಶಾಸಕರು ಮಾಡಿದ ಕೆಲಸಗಳನ್ನು ಗಂಭೀರವಾಗಿ ನೋಡುಕೊಂಡು ಸುಮ್ಮನಿದ್ದೆವು. ನಾವು ಗೆದ್ದ ಎಂಟು ತಿಂಗಳಲ್ಲೇ ನಿಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.. ಇನ್ನು ಐದು ವರ್ಷ ನೀವು ಹೇಗೆ ಇರುತ್ತೀರಾ? ಐದು ವರ್ಷ ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ರಾಷ್ಟ್ರೀಯ ಹೆದ್ದಾರಿ ಅವಾಂತರ, ನೀರಾವರಿ, ನಿರುದ್ಯೋಗ ಸೇರಿದಂತೆ ಯಾವ ವಿಚಾರದಲ್ಲೂ ನೀವು ಹೋರಾಡಲಿಲ್ಲ. ಆದರೆ, ರಾಷ್ಟ್ರ ಧ್ವಜ ಹಾಕಿದ್ದು ತಪ್ಪು ಎಂದು ಹೇಳಲು ನೀವು ಮಂಡ್ಯಕ್ಕೆ ಬಂದಿದ್ದೀರಾ. ಬಿಜೆಪಿ ನಾಯಕರ ಜತೆ ಸೇರಿ ಕುಮಾರಸ್ವಾಮಿಯವರು ರಾಷ್ಟ್ರಧ್ವಜನ ವಿರುದ್ಧ ನಿಂತಿದ್ದೀರಾ? ಜಿಲ್ಲೆಯ ಸ್ವಾಮರಸ್ಯ ಹಾಳು ಮಾಡಲು ಬಂದಿದ್ದೀರಾ… ದಯವಿಟ್ಟು ಬೇಡ ಕುಮಾರಣ್ಣ.. ನೀವು ಎರಡು ಭಾರಿ ಮುಖ್ಯಮಂತ್ರಿ ಆಗಲು ಮಂಡ್ಯ ಜಿಲ್ಲೆಯ ಜನರು ಕಾರಣ’ ಎಂದು ಚೆಲುವರಾಯಸ್ವಾಮಿ ಹೇಳಿದರು.

‘ಸಿಟಿ ರವಿಯವರು ನಮ್ಮ ಸರ್ಕಾರ ಸುಟ್ಟು ಹೋಗುತ್ತೆ ಎಂದು ಹೇಳಿದ್ದಾರೆ. ಆದರೆ, ಸಂವಿಧಾನದ ವಿರುದ್ಧ ನಿಂತಿರುವ ಬಿಜೆಪಿ ಮತ್ತು ಜೆಡಿಎಸ್ ಆ ಸ್ಥಿತಿ ಎದುರಿಸಬೇಕಾಗುತ್ತದೆ. ನಿಮ್ಮ ರೀತಿ ಶಾಪ ಕೊಡಲು ನಾನು ಮುನಿಯೂ ಅಲ್ಲ, ದೇವರೂ ಅಲ್ಲ. ಆದರೆ, ನಮ್ಮ ಜಿಲ್ಲೆಯ ಜನರು ಯಾವ ಕಾರಣಕ್ಕೂ ನಿಮ್ಮನ್ನು ಸಹಿಸುವುದಿಲ್ಲ’ ಎಂದರು.

‘ಕುಮಾರಸ್ವಾಮಿಯವರೆ ನಿಮ್ಮ ಹಿನ್ನೆಲೆ ಸಾಧಾರಣ ಅಲ್ಲ; ನೀವು ಈ ದೇಶದ ಮಾಜಿ ಪ್ರಧಾನಿ ದೇವೇಗೌಡ ಮಗ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ; ಅಂತವರ ಮಗ ನೀವು. ಈ ಜಿಲ್ಲೆಯಲ್ಲಿ ನೀವು ಈಗ ಮಾಡುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ. ನೀವು ಈ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದಿರುವುದನ್ನು ನೆನಪಿಸಿಕೊಳ್ಳಿ. ಪೇಶ್ವೆ ಪಕ್ಷ ಎಂದು ಹೇಳಿದ್ದ ನೀವು ಈಗ ಪೇಶ್ವೆಗಳ ಶಾಲು ಧರಿಸಿದ್ದೀರ. ನಾನು ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರಿ. ಆರ್‌ಎಸ್‌ಎಸ್‌ ಕೆಲಸ ಮಾಡುವುದು ದೇಶ ಕಟ್ಟುವುದಕ್ಕಲ್ಲ, ಇತಿಹಾಸವನ್ನು ತಿರುಚಿ, ಮಕ್ಕಳ ಮನಸ್ಸನ್ನು ಕೆಡಿಸಿ, ಹೃದಯದಲ್ಲಿ ವಿಷ ಬೀಜ ಬಿತ್ತಲು ಎಂದು ಹೇಳಿದ್ದೀರ. ಯಾವುದೇ ಧರ್ಮಕ್ಕೆ ನಿಖರವಾದ ಧ್ವಜ ಇಲ್ಲ.. ಪಂಚಾಯಿತಿ ಷರತ್ತುಗಳಿಗೆ ಒಪ್ಪಿ ಅನುಮತಿ ಪಡೆದುಕೊಂಡಿದ್ದರು. ಷರತ್ತು ಮೀರಿದ್ದರಿಂದ ಟ್ರಸ್ಟ್ ಹಾಕಿದ್ದ ಧ್ವಜ ಇಳಿಸಿ, ಜನವರಿ 26ರಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ’ ಎಂದು ಸಚಿವರು ಎಚ್ಚರಿಕೆ ನೀಡಿದರು.

‘ಕುಮಾರಸ್ವಾಮಿಯವರೆ ನೀವು ಈಗ ಮುಖ್ಯಮಂತ್ರಿಯಾಗಿದ್ದರೆ ಏನು ಮಾಡುತ್ತಿದ್ರಿ? ಧ್ವಜವನ್ನುಅಧಿಕಾರಿಗಳು ತೆಗೆದು ತುಳಿದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಸ್ಥಳೀಯ ಯುವಕರು ಧ್ವಜ ಇಳಿಸಲು ಸಹಾಯ ಮಾಡಿದ್ದಾರೆ. ಆನಂತರ, ಜಿಲ್ಲಾಡಳಿತ ರಾಷ್ಟ್ರ ಧ್ವಜ ಹಾರಿದ್ದಾರೆ. ಬಿಜೆಪಿ ಮತ್ತು ಜನತಾದಳ ನಾಯಕರು ಪಂಚಾಯಿತಿಗೆ ಯಾವ ಅಧಿಕಾರ ಇದೆ ಎಂಬುದನ್ನು ನೋಡಬೇಕು. ಸರ್ಕಾರದ ಜಾಗದಲ್ಲಿ ಏನಾದರೂ ಮಾಡಬೇಕಾಗಿದ್ದರೆ ಸರ್ಕಾರದ ಅನುಮತಿ ಪಡೆಯಬೇಕು. ಪಿಡಿಒ ಶಿಫಾಸು ಮಾಡಲು ಮಾತ್ರ ಅವಕಾಶ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜಕ್ಕೆ ಹೋಲಿಸಿದ ಬಿಜೆಪಿ ನಾಯಕ ಸಿ.ಟಿ ರವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...