Homeಮುಖಪುಟವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ :...

ವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ : ರಾಹುಲ್ ಗಾಂಧಿ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿರುವ ಕುಸ್ತಿಪಟು ವಿನೇಶ್ ಫೋಗಟ್‌ಗೆ ಅಭಿನಂದನೆ ಸಲ್ಲಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ “ವಿನೇಶ್ ಪೋಗಟ್ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಆಕೆಯ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ” ಎಂದಿದ್ದಾರೆ.

ಈ ಮೂಲಕ ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಾಗ ಹೋರಾಟ ನಡೆಸಿದ ಕುಸ್ತಿಪಟುಗಳನ್ನು ಅಪರಾಧಿಗಳಂತೆ ಕಂಡ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದ ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ವಿನೇಶ್ ಫೋಗಟ್ ಅವರು ಮಂಗಳವಾರ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ.

ವಿನೇಶ್ ಸಾಧನೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ “ವಿಶ್ವದ ಮೂವರು ಅಗ್ರಗಣ್ಯ ಕುಸ್ತಿಪಟುಗಳನ್ನು ಒಂದೇ ದಿನದಲ್ಲಿ ಸೋಲಿಸಿದ ವಿನೇಶ್ ಜೊತೆಗೆ ಇಡೀ ದೇಶ ಭಾವುಕವಾಗಿದೆ. ವಿನೇಶ್ ಮತ್ತು ಅವರ ಸಹೋದ್ಯೋಗಿಗಳ ಹೋರಾಟಗಳನ್ನು ಹತ್ತಿಕ್ಕುವವರು, ಅವರ ಉದ್ದೇಶ ಮತ್ತು ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುವವರಿಗೆ ಇಂದು ಉತ್ತರಗಳು ಸಿಕ್ಕಿದೆ” ಎಂದು ಹೇಳಿದ್ದಾರೆ.

“ಇಂದು ಇಡೀ ಅಧಿಕಾರ ವ್ಯವಸ್ಥೆಯೇ ಭಾರತದ ವೀರ ಪುತ್ರಿಯ ಮುಂದೆ ರಕ್ತ ಕಣ್ಣೀರು ಸುರಿಸುವಂತೆ ಆಗಿದೆ. ಇದು ಚಾಂಪಿಯನ್‌ಗಳ ಗುರುತು, ಅವರು ತಮ್ಮ ಕಾರ್ಯ ಕ್ಷೇತ್ರದಿಂದ ಉತ್ತರಗಳನ್ನು ನೀಡುತ್ತಾರೆ. ವಿನೇಶ್ ಅವರಿಗೆ ಶುಭಾಶಯಗಳು. ಪ್ಯಾರಿಸ್‌ನಲ್ಲಿ ನಿಮ್ಮ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಸ್ಪಷ್ಟವಾಗಿ ಕೇಳಿಸಿತು” ಎಂದಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ, ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿತ್ತು. ಆಗ ಬ್ರಿಜ್ ಭೂಷಣ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ನೇತೃತ್ವದಲ್ಲಿ ಹೋರಾಟ ನಡೆದಿತ್ತು.

ಕೇಂದ್ರ ಸರ್ಕಾರ ಕುಸ್ತಿಪಟುಗಳ ಅಳಲು ಕೇಳುವ ಬದಲಾಗಿ, ಅವರನ್ನು ಟೀಕಿಸುವ ಕೆಲಸ ಮಾಡಿತ್ತು. ಬಿಜೆಪಿ ಮತ್ತು ಸಂಘಪರಿವಾರದ ಐಟಿ ಸೆಲ್‌ಗಳು ವಿನೇಶ್ ಫೋಗಟ್‌ ಸೇರಿದಂತೆ ಹೋರಾಟ ನಿರತ ಕುಸ್ತಿಪಟುಗಳನ್ನು ದೇಶದ್ರೋಹಿಗಳಂತೆ ಬಿಂಬಿಸಿತ್ತು. ಅವರ ಹೋರಾಟ ರಾಜಕೀಯ ಪ್ರೇರಿತ ಎಂದಿತ್ತು. ಬ್ರಿಜ್ ಭೂಷಣ್ ವಿರುದ್ದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇವೆಲ್ಲದಕ್ಕೂ ತನ್ನ ಒಲಿಂಪಿಕ್ಸ್‌ ಸಾಧನೆಯ ಮೂಲಕ ವಿನೇಶ್ ಉತ್ತರ ನೀಡಿದ್ದಾರೆ ಎಂದು ಇಡೀ ದೇಶ ಕೊಂಡಾಡುತ್ತಿದೆ.

ಇದನ್ನೂ ಓದಿ : ಲೋಕಸಭೆ ಅಧಿವೇಶನ: ದಲಿತರ ಮೀಸಲಾತಿಯ ‘ಸುರಕ್ಷತಾ ಕ್ರಮ’ ಖಚಿತಪಡಿಸಿಕೊಳ್ಳುವಂತೆ ರಾಜಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...