Homeಮುಖಪುಟವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ :...

ವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ : ರಾಹುಲ್ ಗಾಂಧಿ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿರುವ ಕುಸ್ತಿಪಟು ವಿನೇಶ್ ಫೋಗಟ್‌ಗೆ ಅಭಿನಂದನೆ ಸಲ್ಲಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ “ವಿನೇಶ್ ಪೋಗಟ್ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಆಕೆಯ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ” ಎಂದಿದ್ದಾರೆ.

ಈ ಮೂಲಕ ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಾಗ ಹೋರಾಟ ನಡೆಸಿದ ಕುಸ್ತಿಪಟುಗಳನ್ನು ಅಪರಾಧಿಗಳಂತೆ ಕಂಡ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದ ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ವಿನೇಶ್ ಫೋಗಟ್ ಅವರು ಮಂಗಳವಾರ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ.

ವಿನೇಶ್ ಸಾಧನೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ “ವಿಶ್ವದ ಮೂವರು ಅಗ್ರಗಣ್ಯ ಕುಸ್ತಿಪಟುಗಳನ್ನು ಒಂದೇ ದಿನದಲ್ಲಿ ಸೋಲಿಸಿದ ವಿನೇಶ್ ಜೊತೆಗೆ ಇಡೀ ದೇಶ ಭಾವುಕವಾಗಿದೆ. ವಿನೇಶ್ ಮತ್ತು ಅವರ ಸಹೋದ್ಯೋಗಿಗಳ ಹೋರಾಟಗಳನ್ನು ಹತ್ತಿಕ್ಕುವವರು, ಅವರ ಉದ್ದೇಶ ಮತ್ತು ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುವವರಿಗೆ ಇಂದು ಉತ್ತರಗಳು ಸಿಕ್ಕಿದೆ” ಎಂದು ಹೇಳಿದ್ದಾರೆ.

“ಇಂದು ಇಡೀ ಅಧಿಕಾರ ವ್ಯವಸ್ಥೆಯೇ ಭಾರತದ ವೀರ ಪುತ್ರಿಯ ಮುಂದೆ ರಕ್ತ ಕಣ್ಣೀರು ಸುರಿಸುವಂತೆ ಆಗಿದೆ. ಇದು ಚಾಂಪಿಯನ್‌ಗಳ ಗುರುತು, ಅವರು ತಮ್ಮ ಕಾರ್ಯ ಕ್ಷೇತ್ರದಿಂದ ಉತ್ತರಗಳನ್ನು ನೀಡುತ್ತಾರೆ. ವಿನೇಶ್ ಅವರಿಗೆ ಶುಭಾಶಯಗಳು. ಪ್ಯಾರಿಸ್‌ನಲ್ಲಿ ನಿಮ್ಮ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಸ್ಪಷ್ಟವಾಗಿ ಕೇಳಿಸಿತು” ಎಂದಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ, ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿತ್ತು. ಆಗ ಬ್ರಿಜ್ ಭೂಷಣ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ನೇತೃತ್ವದಲ್ಲಿ ಹೋರಾಟ ನಡೆದಿತ್ತು.

ಕೇಂದ್ರ ಸರ್ಕಾರ ಕುಸ್ತಿಪಟುಗಳ ಅಳಲು ಕೇಳುವ ಬದಲಾಗಿ, ಅವರನ್ನು ಟೀಕಿಸುವ ಕೆಲಸ ಮಾಡಿತ್ತು. ಬಿಜೆಪಿ ಮತ್ತು ಸಂಘಪರಿವಾರದ ಐಟಿ ಸೆಲ್‌ಗಳು ವಿನೇಶ್ ಫೋಗಟ್‌ ಸೇರಿದಂತೆ ಹೋರಾಟ ನಿರತ ಕುಸ್ತಿಪಟುಗಳನ್ನು ದೇಶದ್ರೋಹಿಗಳಂತೆ ಬಿಂಬಿಸಿತ್ತು. ಅವರ ಹೋರಾಟ ರಾಜಕೀಯ ಪ್ರೇರಿತ ಎಂದಿತ್ತು. ಬ್ರಿಜ್ ಭೂಷಣ್ ವಿರುದ್ದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇವೆಲ್ಲದಕ್ಕೂ ತನ್ನ ಒಲಿಂಪಿಕ್ಸ್‌ ಸಾಧನೆಯ ಮೂಲಕ ವಿನೇಶ್ ಉತ್ತರ ನೀಡಿದ್ದಾರೆ ಎಂದು ಇಡೀ ದೇಶ ಕೊಂಡಾಡುತ್ತಿದೆ.

ಇದನ್ನೂ ಓದಿ : ಲೋಕಸಭೆ ಅಧಿವೇಶನ: ದಲಿತರ ಮೀಸಲಾತಿಯ ‘ಸುರಕ್ಷತಾ ಕ್ರಮ’ ಖಚಿತಪಡಿಸಿಕೊಳ್ಳುವಂತೆ ರಾಜಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...