Homeಕರ್ನಾಟಕ'136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..'; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್...

‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಬದಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಆದರೆ, ಜೆಡಿಎಸ್ ಕೋರ್ ಕಮಿಟಿ ಸಂಚಾಲಕ, ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸಿಎಂ ಬೆಂಬಲಕ್ಕೆ ನಿಂತಿದ್ದು, “136 ಸ್ಥಾನ ಗೆದ್ದು ಮುಖ್ಯಮಂತ್ರಿ ಆದವರು ರಾಜೀನಾಮೆ ಕೊಡಲು ಆಗುತ್ತಾ..? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ” ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ ದಸರಾ ಉದ್ಘಾಟನೆಯಲ್ಲಿ ಇಂದು ಮಾತನಾಡಿದ ಜೆ‌ಡಿ‌ಎಸ್ ನಾಯಕ ಜಿಟಿ ದೇವೇಗೌಡ, ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. ಇದೊಂದು ಸಣ್ಣ ಪ್ರಕರಣ ಎಂದು ಹೇಳಿರುವ ಅವರು, “ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ, ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ..?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ತಾಯಿಯ ವರಪುತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ ಜಿಟಿಡಿ, ಅವರನ್ನು “ಚಾಮುಂಡೇಶ್ವರಿ ತಾಯಿಯ ವರಪುತ್ರ” ಎಂದು ಹೊಗಳಿದರು. “ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ಅವರಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಮಾತ್ರವೇ ಸಾಧ್ಯ. ಕಠಿಣ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ” ಎಂದು ಹೇಳಿದರು.

ಹಿಂದೆ ಉಪ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕೆ ನಾವು ತೀರ್ಮಾನಿಸಿದ್ದೆವು. ಆದರೆ, ಮುಖ್ಯಮಂತ್ರಿಗಳು ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿರುವುದು ಎಂದರು.

“ಸಿದ್ದರಾಮಯ್ಯ ಎಂದಿಗೂ ತಮ್ಮ ಕುಟುಂಬ ನೋಡಿದವರಲ್ಲ. ಈಗ ಎಲ್ಲರೂ ತಮ್ಮ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ?” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನ್ಯಾಯಾಲಯ ಹೇಳಿದೆಯಾ? , ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ” ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದರು.

“ಅವರು 136 ಸ್ಥಾನ ಗೆದ್ದು ಸಿಎಂ ಆಗಿದ್ದಾರೆ.. ಈಗ ರಾಜೀನಾಮೆ ಕೊಡಲು ಆಗುತ್ತಾ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಅತ್ಯಾಚಾರ, ಕೊಲೆ ನಡೆದರೆ ಮಾಧ್ಯಮಗಳು ಮೂರು ತಿಂಗಳು ತೋರಿಸುತ್ತವೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ಅಂತ ತೋರಿಸುತ್ತಿರಾ” ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, “ಯಾರ್ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲರೂ ವಿಧಾನಸೌಧದ ಮುಂದೆ ಬಂದು ನಿಂತುಕೊಳ್ಳಿ. ಕೇಂದ್ರದಿಂದ ರಾಜ್ಯಕ್ಕೆ ಏನೂ ತರಬೇಕೋ ಅದರ ಕಡೆ ಗಮನ ಕೊಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ” ಎಂದು ಜಿ‌ಟಿ ದೇವೇಗೌಡ ವಾಗ್ದಾಳಿ ನಡೆಸಿದರು.

ದಸರಾ ಉದ್ಘಾಟನೆ ಭಾಷಣದುದ್ದಕ್ಕೂ ತಮ್ಮನ್ನು ಹಾಡಿಹೊಗಳಿದ ಜಿಟಿ ದೇವೇಗೌಡರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸಗೊಂಡರು.

ಇದನ್ನೂ ಓದಿ; ₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...