Homeಕರ್ನಾಟಕ'136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..'; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್...

‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಬದಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಆದರೆ, ಜೆಡಿಎಸ್ ಕೋರ್ ಕಮಿಟಿ ಸಂಚಾಲಕ, ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸಿಎಂ ಬೆಂಬಲಕ್ಕೆ ನಿಂತಿದ್ದು, “136 ಸ್ಥಾನ ಗೆದ್ದು ಮುಖ್ಯಮಂತ್ರಿ ಆದವರು ರಾಜೀನಾಮೆ ಕೊಡಲು ಆಗುತ್ತಾ..? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ” ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ ದಸರಾ ಉದ್ಘಾಟನೆಯಲ್ಲಿ ಇಂದು ಮಾತನಾಡಿದ ಜೆ‌ಡಿ‌ಎಸ್ ನಾಯಕ ಜಿಟಿ ದೇವೇಗೌಡ, ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. ಇದೊಂದು ಸಣ್ಣ ಪ್ರಕರಣ ಎಂದು ಹೇಳಿರುವ ಅವರು, “ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ, ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ..?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ತಾಯಿಯ ವರಪುತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ ಜಿಟಿಡಿ, ಅವರನ್ನು “ಚಾಮುಂಡೇಶ್ವರಿ ತಾಯಿಯ ವರಪುತ್ರ” ಎಂದು ಹೊಗಳಿದರು. “ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ಅವರಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಮಾತ್ರವೇ ಸಾಧ್ಯ. ಕಠಿಣ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ” ಎಂದು ಹೇಳಿದರು.

ಹಿಂದೆ ಉಪ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕೆ ನಾವು ತೀರ್ಮಾನಿಸಿದ್ದೆವು. ಆದರೆ, ಮುಖ್ಯಮಂತ್ರಿಗಳು ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿರುವುದು ಎಂದರು.

“ಸಿದ್ದರಾಮಯ್ಯ ಎಂದಿಗೂ ತಮ್ಮ ಕುಟುಂಬ ನೋಡಿದವರಲ್ಲ. ಈಗ ಎಲ್ಲರೂ ತಮ್ಮ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ?” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನ್ಯಾಯಾಲಯ ಹೇಳಿದೆಯಾ? , ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ” ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದರು.

“ಅವರು 136 ಸ್ಥಾನ ಗೆದ್ದು ಸಿಎಂ ಆಗಿದ್ದಾರೆ.. ಈಗ ರಾಜೀನಾಮೆ ಕೊಡಲು ಆಗುತ್ತಾ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಅತ್ಯಾಚಾರ, ಕೊಲೆ ನಡೆದರೆ ಮಾಧ್ಯಮಗಳು ಮೂರು ತಿಂಗಳು ತೋರಿಸುತ್ತವೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ಅಂತ ತೋರಿಸುತ್ತಿರಾ” ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, “ಯಾರ್ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲರೂ ವಿಧಾನಸೌಧದ ಮುಂದೆ ಬಂದು ನಿಂತುಕೊಳ್ಳಿ. ಕೇಂದ್ರದಿಂದ ರಾಜ್ಯಕ್ಕೆ ಏನೂ ತರಬೇಕೋ ಅದರ ಕಡೆ ಗಮನ ಕೊಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ” ಎಂದು ಜಿ‌ಟಿ ದೇವೇಗೌಡ ವಾಗ್ದಾಳಿ ನಡೆಸಿದರು.

ದಸರಾ ಉದ್ಘಾಟನೆ ಭಾಷಣದುದ್ದಕ್ಕೂ ತಮ್ಮನ್ನು ಹಾಡಿಹೊಗಳಿದ ಜಿಟಿ ದೇವೇಗೌಡರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸಗೊಂಡರು.

ಇದನ್ನೂ ಓದಿ; ₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...