Homeಕರ್ನಾಟಕ'136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..'; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್...

‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಬದಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಆದರೆ, ಜೆಡಿಎಸ್ ಕೋರ್ ಕಮಿಟಿ ಸಂಚಾಲಕ, ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸಿಎಂ ಬೆಂಬಲಕ್ಕೆ ನಿಂತಿದ್ದು, “136 ಸ್ಥಾನ ಗೆದ್ದು ಮುಖ್ಯಮಂತ್ರಿ ಆದವರು ರಾಜೀನಾಮೆ ಕೊಡಲು ಆಗುತ್ತಾ..? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ” ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ ದಸರಾ ಉದ್ಘಾಟನೆಯಲ್ಲಿ ಇಂದು ಮಾತನಾಡಿದ ಜೆ‌ಡಿ‌ಎಸ್ ನಾಯಕ ಜಿಟಿ ದೇವೇಗೌಡ, ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. ಇದೊಂದು ಸಣ್ಣ ಪ್ರಕರಣ ಎಂದು ಹೇಳಿರುವ ಅವರು, “ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ, ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ..?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ತಾಯಿಯ ವರಪುತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ ಜಿಟಿಡಿ, ಅವರನ್ನು “ಚಾಮುಂಡೇಶ್ವರಿ ತಾಯಿಯ ವರಪುತ್ರ” ಎಂದು ಹೊಗಳಿದರು. “ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ಅವರಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಮಾತ್ರವೇ ಸಾಧ್ಯ. ಕಠಿಣ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ” ಎಂದು ಹೇಳಿದರು.

ಹಿಂದೆ ಉಪ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕೆ ನಾವು ತೀರ್ಮಾನಿಸಿದ್ದೆವು. ಆದರೆ, ಮುಖ್ಯಮಂತ್ರಿಗಳು ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿರುವುದು ಎಂದರು.

“ಸಿದ್ದರಾಮಯ್ಯ ಎಂದಿಗೂ ತಮ್ಮ ಕುಟುಂಬ ನೋಡಿದವರಲ್ಲ. ಈಗ ಎಲ್ಲರೂ ತಮ್ಮ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ?” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನ್ಯಾಯಾಲಯ ಹೇಳಿದೆಯಾ? , ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ” ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದರು.

“ಅವರು 136 ಸ್ಥಾನ ಗೆದ್ದು ಸಿಎಂ ಆಗಿದ್ದಾರೆ.. ಈಗ ರಾಜೀನಾಮೆ ಕೊಡಲು ಆಗುತ್ತಾ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಅತ್ಯಾಚಾರ, ಕೊಲೆ ನಡೆದರೆ ಮಾಧ್ಯಮಗಳು ಮೂರು ತಿಂಗಳು ತೋರಿಸುತ್ತವೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ಅಂತ ತೋರಿಸುತ್ತಿರಾ” ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, “ಯಾರ್ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲರೂ ವಿಧಾನಸೌಧದ ಮುಂದೆ ಬಂದು ನಿಂತುಕೊಳ್ಳಿ. ಕೇಂದ್ರದಿಂದ ರಾಜ್ಯಕ್ಕೆ ಏನೂ ತರಬೇಕೋ ಅದರ ಕಡೆ ಗಮನ ಕೊಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ” ಎಂದು ಜಿ‌ಟಿ ದೇವೇಗೌಡ ವಾಗ್ದಾಳಿ ನಡೆಸಿದರು.

ದಸರಾ ಉದ್ಘಾಟನೆ ಭಾಷಣದುದ್ದಕ್ಕೂ ತಮ್ಮನ್ನು ಹಾಡಿಹೊಗಳಿದ ಜಿಟಿ ದೇವೇಗೌಡರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸಗೊಂಡರು.

ಇದನ್ನೂ ಓದಿ; ₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...