Homeಕರ್ನಾಟಕ'136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..'; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್...

‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಬದಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಆದರೆ, ಜೆಡಿಎಸ್ ಕೋರ್ ಕಮಿಟಿ ಸಂಚಾಲಕ, ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸಿಎಂ ಬೆಂಬಲಕ್ಕೆ ನಿಂತಿದ್ದು, “136 ಸ್ಥಾನ ಗೆದ್ದು ಮುಖ್ಯಮಂತ್ರಿ ಆದವರು ರಾಜೀನಾಮೆ ಕೊಡಲು ಆಗುತ್ತಾ..? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ” ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ ದಸರಾ ಉದ್ಘಾಟನೆಯಲ್ಲಿ ಇಂದು ಮಾತನಾಡಿದ ಜೆ‌ಡಿ‌ಎಸ್ ನಾಯಕ ಜಿಟಿ ದೇವೇಗೌಡ, ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. ಇದೊಂದು ಸಣ್ಣ ಪ್ರಕರಣ ಎಂದು ಹೇಳಿರುವ ಅವರು, “ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ, ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ..?” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ತಾಯಿಯ ವರಪುತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ ಜಿಟಿಡಿ, ಅವರನ್ನು “ಚಾಮುಂಡೇಶ್ವರಿ ತಾಯಿಯ ವರಪುತ್ರ” ಎಂದು ಹೊಗಳಿದರು. “ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ಅವರಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಮಾತ್ರವೇ ಸಾಧ್ಯ. ಕಠಿಣ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ” ಎಂದು ಹೇಳಿದರು.

ಹಿಂದೆ ಉಪ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದಕ್ಕೆ ನಾವು ತೀರ್ಮಾನಿಸಿದ್ದೆವು. ಆದರೆ, ಮುಖ್ಯಮಂತ್ರಿಗಳು ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರ ಮೇಲಿರುವುದು ಎಂದರು.

“ಸಿದ್ದರಾಮಯ್ಯ ಎಂದಿಗೂ ತಮ್ಮ ಕುಟುಂಬ ನೋಡಿದವರಲ್ಲ. ಈಗ ಎಲ್ಲರೂ ತಮ್ಮ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ?” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ನ್ಯಾಯಾಲಯ ಹೇಳಿದೆಯಾ? , ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ” ಎಂದು ನೇರವಾಗಿಯೇ ಅಸಮಾಧಾನ ಹೊರಹಾಕಿದರು.

“ಅವರು 136 ಸ್ಥಾನ ಗೆದ್ದು ಸಿಎಂ ಆಗಿದ್ದಾರೆ.. ಈಗ ರಾಜೀನಾಮೆ ಕೊಡಲು ಆಗುತ್ತಾ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಅತ್ಯಾಚಾರ, ಕೊಲೆ ನಡೆದರೆ ಮಾಧ್ಯಮಗಳು ಮೂರು ತಿಂಗಳು ತೋರಿಸುತ್ತವೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ಅಂತ ತೋರಿಸುತ್ತಿರಾ” ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, “ಯಾರ್ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲರೂ ವಿಧಾನಸೌಧದ ಮುಂದೆ ಬಂದು ನಿಂತುಕೊಳ್ಳಿ. ಕೇಂದ್ರದಿಂದ ರಾಜ್ಯಕ್ಕೆ ಏನೂ ತರಬೇಕೋ ಅದರ ಕಡೆ ಗಮನ ಕೊಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ” ಎಂದು ಜಿ‌ಟಿ ದೇವೇಗೌಡ ವಾಗ್ದಾಳಿ ನಡೆಸಿದರು.

ದಸರಾ ಉದ್ಘಾಟನೆ ಭಾಷಣದುದ್ದಕ್ಕೂ ತಮ್ಮನ್ನು ಹಾಡಿಹೊಗಳಿದ ಜಿಟಿ ದೇವೇಗೌಡರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸಗೊಂಡರು.

ಇದನ್ನೂ ಓದಿ; ₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...