Homeಕರ್ನಾಟಕ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ ಎಂದು ಸ್ವಾಮೀಜಿಗಳು ಫರ್ಮಾನು ಹೊರಡಿಸುತ್ತಿರುವ ದಿನಗಳಿವು. ಆದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ ವಚನಗಳನ್ನು ಪಾಲಿಸಿ, ಅದರಂತೆ ನಡೆದ ಮಹಾತ್ಮ: ಜಸ್ಟೀಸ್ ದಾಸ್‌

- Advertisement -
- Advertisement -

“ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಷ್ಟ್ರೀಯ ಪ್ರಶಸ್ತಿಯ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ” ಎಂದು ಜಸ್ಟೀಸ್‌ ಎಚ್.ಎನ್‌.ನಾಗಮೋಹನ ದಾಸ್‌ ತಿಳಿಸಿದರು.

ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ’ನಾನು ಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಅವರು, “ಕೆಲವು ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಲಿದೆ. ಕೆಲವರಿಗೆ ಕೆಲವು ಪ್ರಶಸ್ತಿಗಳನ್ನು ನೀಡುವುದರಿಂದ ವ್ಯಕ್ತಿಗಳ ಗೌರವ ಹೆಚ್ಚಾಗುತ್ತದೆ. ನನ್ನಂಥ ಸಾಧಾರಣ ನ್ಯಾಯಾಧೀಶನನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡುತ್ತಿರುವುದು ನನ್ನ ಪಾಲಿಗೆ ಮಹತ್ತರವಾದ ದಿನ. ಇದಕ್ಕಿಂತ ಹೆಚ್ಚು ನಾನು ಆಪೇಕ್ಷಿಸುವುದೂ ಇಲ್ಲ. ಈ ಪ್ರಶಸ್ತಿಯಿಂದಾಗಿ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕಾಯಕ ಚಳವಳಿಯ ಸಂದೇಶವನ್ನು, ವಚನ ಚಳವಳಿಯ ಸಂದೇಶವನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸುವ ಕೆಲಸವನ್ನು ನಾನು ಮಾಡಬೇಕಾಗಿದೆ” ಎಂದು ಹೇಳಿದರು.

“ಇಂದು ಎಂತಹ ಪರಿಸ್ಥಿತಿ ಇದೆ ಎಂದರೆ ಬಸವಣ್ಣನವರ ಫೋಟೋ ಹಾಕಿಕೊಂಡು ವಚನ ಹೇಳುತ್ತಾರೆ. ಆದರೆ ವಚನ ಸಂದೇಶ ಪಾಲಿಸುವುದಿಲ್ಲ. ಜನಹಿತಕ್ಕೆ ಶರಣಾಗಬೇಕಾದವರು, ಜಾತಿಹಿತಕ್ಕೆ ಶರಣಾಗಿ ಹೋದರು. ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ, ನಮ್ಮ ಫರ್ಮಾನುಗಳಿಗೆ ನೀವು ಗೌರವ ಕೊಡದಿದ್ದರೆ ನಿಮಗೆ ಬುದ್ಧಿ ಕಲಿಸುತ್ತೇವೆ. ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಧಮ್ಕಿ ಹಾಕುವ ಪರಿಸ್ಥಿತಿ ಈಗ ಇದೆ. ಯಾವ ಸ್ವಾಮೀಜಿಗಳ ಬಗ್ಗೆ ಗೌರವ ಇಟ್ಟುಕೊಂಡು, ನಂಬಿಕೆ ಇಟ್ಟುಕೊಂಡು ಮಹಾತ್ಮರು ಎಂದು ತಿಳಿದುಕೊಂಡಿದ್ದೆವೆಯೋ ಅಂತಹ ಸ್ವಾಮೀಜಿಗಳು ನಮ್ಮನ್ನು ನಿರಾಶೆಗೊಳಿಸಿದರು. ಏಕೆ ಹೀಗೆ ಸ್ವಾಮೀಜಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ನೊಂದಿಕೊಂಡಿದ್ದೆ. ಅಂತಹ ಸನ್ನಿವೇಶದಲ್ಲಿ ವಚನಗಳನ್ನು ಓದಿಕೊಂಡು ಅರ್ಥಮಾಡಿಕೊಂಡು ಅದರಂತೆ ಬದುಕಿ ಮಾದರಿಯಾದಂತಹ ಒಬ್ಬ ದಾರ್ಶನಿಕ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಹೆಸರಿನ ಪ್ರಶಸ್ತಿ ಬಂದಿರುವುದು ನನ್ನ ಸೌಭಾಗ್ಯ” ಎಂದು ಸಂತಸ ವ್ಯಕ್ತಪಡಿಸಿದರು.

“ಅಡ್ಡಪಲ್ಲಕ್ಕಿಯನ್ನು ತೊರೆದು, ಪಾದಪೂಜೆಯನ್ನು ನಿರಾಕರಿಸಿದ ಸಿದ್ಧಲಿಂಗ ಸ್ವಾಮೀಜಿ, ಇಡೀ ಮಠ ಸಂಸ್ಕೃತಿಗೆ ಹೊಸ ತೋರಣ ಕಟ್ಟಿದವರು; ಅದಕ್ಕೆ ಹೊಸ ತಾತ್ಪರ್ಯವನ್ನು ಬರೆದವರು. ಮಠಾಧೀಶರ ಮಡಿವಂತಿಕೆಯನ್ನು ದೂರ ಸರಿಸಿ ಎಲ್ಲ ಜಾತಿಯ, ಧರ್ಮದ ಜನರ ಹತ್ತಿರವಾಗಿ ಸಾಮಾನ್ಯರಲ್ಲಿ, ಸಾಮಾನ್ಯರಾಗಿ ಬಾಳಿದರು. ಕನ್ನಡಪರ ಕೆಲಸ, ಗಡಿ ಕೆಲಸ, ನಾಡಿನ ಪರಿಸರ ಸಂರಕ್ಷಣೆಯ ಕೆಲಸ ಮಾಡಿದರು. ಭ್ರಷ್ಟಾಚಾರದ ವಿರುದ್ಧ, ಕೋಮುವಾದದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಎಲ್ಲ ಧರ್ಮದ ಜನರ ನಡುವೆ ಭಾವೈಕ್ಯತೆಯನ್ನು ಬೆಳೆಸಿದರು. ಅಂತಹ ಮಹಾನ್‌ ಚಿಂತಕ, ಕ್ರಾಂತಿಕಾರಿ ಎಂದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ. ಅಂತಹ ಮಹಾತ್ಮರ ಹೆಸರಲ್ಲಿ ನನಗೆ ಪ್ರಶಸ್ತಿ ಬಂದಿರುವುದಕ್ಕಿಂತ ಸಂತೋಷದ ಸಂಗತಿ ಮತ್ತೊಂದಿಲ್ಲ. ಈ ಪ್ರಶಸ್ತಿಯ ಹಣವನ್ನು ಸತ್ಕಾರ್ಯಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸಲು ತೀರ್ಮಾನಿಸಿದ್ದೇನೆ” ಎಂದರು.

 ಇದನ್ನೂ ಓದಿರಿ: ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

“ನನಗೆ ಬರುವ ಪಿಂಚಣಿ ಹಣವೇ ಜೀವನಕ್ಕೆ ಸಾಕು” ಎನ್ನುವ ಜಸ್ಟೀಸ್‌ ನಾಗಮೋಹನ ದಾಸ್ ಅವರು ಇದುವರೆಗೂ ಬಂದಿರುವ ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಬೀದರ್‌ನ ಬಸವ ಪ್ರಶಸ್ತಿ, ಮುರುಘಾ ಮಠದ ಜಯದೇವ ಪ್ರಶಸ್ತಿ, ಮಂಡ್ಯದ ಮಾದೇಗೌಡರ ಪ್ರಶಸ್ತಿ… ಹೀಗೆ ಬಂದ ಅನೇಕ  ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಅವರು ಈ ಹಿಂದೆಯೂ ಬಳಸಿದ್ದಾರೆ.

“ಸಂವಿಧಾನ ಓದು ಅಭಿಯಾನ ಹೇಗೆ ನಡೆಯುತ್ತಿದೆ?” ಎಂದು ಅವರಲ್ಲಿ ಕೇಳಿದಾಗ, “ಸಂವಿಧಾನ ಓದು ಅಭಿಯಾನವನ್ನು ನಿರಂತರವಾಗಿ ಮೂರು ವರ್ಷಗಳಿಂದ ನಡೆಸಲಾಗುತ್ತಿದೆ. ಕೊರೊನಾ ಇದ್ದರೂ ಚಿಂತಿಸದೆ ಆ‌ನ್‌ಲೈನ್‌ ಮೂಲಕ ಅಭಿಯಾನವನ್ನು ನಡೆಸಿದ್ದೇವೆ. ಪ್ರತಿ ತಿಂಗಳು ಸುಮಾರು 20 ಕಾರ್ಯಕ್ರಮ ನಡೆಸಲಾಗಿದೆ. ಈಗಲೂ ಆನ್‌ಲೈನ್‌ನಲ್ಲಿ ಕಾರ್ಯಕ್ರಮ ಮುಂದುವರಿದಿದೆ. ಕೊರೊನಾ ಕಡಿಮೆಯಾಗಿರುವುದರಿಂದ ಆಹ್ವಾನ ಬಂದಿವೆ. ಹೋಗಲು ಆರಂಭಿಸಿದ್ದೇನೆ. ‘ಸಂವಿಧಾನ ಓದು’ ಕೃತಿಯ ಸುಮಾರು 2 ಲಕ್ಷ ಪ್ರತಿಗಳು ಮಾರಾಟವಾಗಿವೆ. ಈ ಕೃತಿ ಇಂಗ್ಲಿಷ್‌, ಹಿಂದಿಗೆ ಭಾಷಾಂತರವಾಗಿದೆ. ಮಲಯಾಳಂಗೂ ತರ್ಜುಮೆಯಾಗಿದ್ದು, ಬಿಡುಗಡೆಯಾಗಬೇಕಿದೆ. ರಾಜ್ಯದ  ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿ ಯುವಜನರು ಕಾರ್ಯಕ್ರಮ ಕೇಳಿದ್ದಾರೆ. ಎಲ್ಲ ಜನವರ್ಗವೂ ಈ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕೇಳಿಕೊಳ್ಳುತ್ತಿದೆ. ಮಠಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ. ಹೀಗೆ ಸಂವಿಧಾನ ಓದು ಅಭಿಯಾನ ಮುಂದುವರಿದಿದೆ” ಎಂದರು.

ಸಮಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ಜಸ್ಟೀಸ್‌ ನಾಗಮೋಹನ ದಾಸ್‌ ಅವರಿಗೆ ನೀಡಲಾಗುತ್ತಿದೆ.

ಇದನ್ನೂ ಓದಿರಿ: ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu chaluvali” bagge bahala aasakti moodide , ei mahattara chaluvaliya bhaaga vaagi deshada seve maadalichesuttene eidara bagge maahiti kodabekendu kelikolluttene.

  2. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu abhiyana” bagge bahala aasakti moodide , ei mahattara abhiyaanada bhaaga vaagi deshada seve maadalichesuttene eidara bagge maahiti kodabekendu kelikolluttene.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...