Homeಮುಖಪುಟಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

- Advertisement -
- Advertisement -

ರೈತರ ಆಂದೋಲನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡಿರುವ ಸಲಹೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸರ್ಕಾರ, ರಾಜ್ಯವು ಗಡಿಯಲ್ಲಿ ಪ್ರತಿಭಟನಾಕಾರರಿಗೆ ಸೇರಲು ಅವಕಾಶ ನೀಡುತ್ತಿದೆ ಎಂದು ಹೇಳುವುದು ಸಂಪೂರ್ಣ ತಪ್ಪು ಎಂದು ಹೇಳಿದೆ.

ಹರಿಯಾಣ ಪೊಲೀಸರ ಅಶ್ರುವಾಯು ಶೆಲ್‌ಗಳು, ರಬ್ಬರ್ ಬುಲೆಟ್‌ಗಳು, ಡ್ರೋನ್‌ಗಳು ಮತ್ತು ದೈಹಿಕ ಬಲದ ಬಳಕೆಯಿಂದಾಗಿ 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೂ, ಪಂಜಾಬ್ ಸರ್ಕಾರವು ‘ಜವಾಬ್ದಾರಿಯಿಂದ’ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡಿದೆ ಎಂದು ಅದು ಹೇಳಿಕೊಂಡಿದೆ.

ಬುಧವಾರದಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವ ಮುನ್ನ 14,000 ಕ್ಕೂ ಹೆಚ್ಚು ಜನರು 1,200 ಟ್ರಾಕ್ಟರ್-ಟ್ರಾಲಿಗಳು ಮತ್ತು ಇತರ ವಾಹನಗಳೊಂದಿಗೆ ಪಂಜಾಬ್-ಹರಿಯಾಣ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ ಎಂಬ ವರದಿಗಳ ನಂತರ, ಗೃಹ ವ್ಯವಹಾರಗಳ ಸಚಿವಾಲಯ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ.

ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಬುಧವಾರ ಬರೆದ ಪತ್ರದಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹಿಂದಿನ ದಿನ ಹೊರಡಿಸಿದ ಆದೇಶಗಳನ್ನು ಸ್ವೀಕರಿಸಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ ರೈತರು ರಸ್ತೆಯ ಮೇಲೆ ಟ್ರ್ಯಾಕ್ಟರ್-ಟ್ರಾಲಿಗಳನ್ನು ಬಳಸದಂತೆ ಕೇಳಿಕೊಂಡಿದೆ.  ನ್ಯಾಯಾಲಯದ ವೆಬ್‌ಸೈಟ್‌ನಲ್ಲಿಯೂ ಆದೇಶವನ್ನು ಅಪ್‌ಲೋಡ್ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ರೈತರು ಪ್ರತಿಭಟಿಸಲು ದೆಹಲಿಗೆ ಹೋಗುತ್ತಿದ್ದಾರೆ ಮತ್ತು ಪಂಜಾಬ್ ಮತ್ತು ಹರಿಯಾಣದ ಗಡಿಯಲ್ಲಿ ಅವರನ್ನು ತಡೆದಿದ್ದರಿಂದ ಅವರನ್ನು ಅಲ್ಲಿಯೆ ನಿಲ್ಲಿಸಲಾಯಿತು ಎಂದು ವರ್ಮಾ ಹೇಳಿದ್ದಾರೆ.

‘ಹರಿಯಾಣ ಪೊಲೀಸರು ಬಳಸಿದ ಅಶ್ರುವಾಯು, ರಬ್ಬರ್ ಬುಲೆಟ್‌ಗಳು, ದೈಹಿಕ ಬಲ ಮತ್ತು ಡ್ರೋನ್‌ಗಳಿಂದ ಇದುವರೆಗೆ 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದರ ನಂತರವೂ ಪಂಜಾಬ್ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದೆ’ ಎಂದು ಪಂಜಾಬ್ ತನ್ನ ಪತ್ರದಲ್ಲಿ ತಿಳಿಸಿದೆ.

ರೈತರ ಬಗ್ಗೆ ಹೆಚ್ಚು ಸಹಾನುಭೂತಿ ತೋರಿಸಲು ಕರೆ ನೀಡಿದ ಮುಖ್ಯ ಕಾರ್ಯದರ್ಶಿ, ಪಂಜಾಬ್ ಗಡಿ ರಾಜ್ಯವಾಗಿರುವುದರಿಂದ ಪ್ರತಿಭಟನೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪಂಜಾಬ್ ಸರ್ಕಾರವು ಮಾತುಕತೆಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಒತ್ತಿ ಹೇಳಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರ ಮತ್ತು ರೈತರ ನಡುವಿನ ನಾಲ್ಕು ಸಭೆಗಳಲ್ಲಿ ಮೂರರಲ್ಲಿ ಭಾಗವಹಿಸಿದ್ದರು.  ಮಾನ್ ಅವರು ಭಾಗವಹಿಸಲು ಸಾಧ್ಯವಾಗದ ಏಕೈಕ ಸಭೆಗೆ ಕ್ಯಾಬಿನೆಟ್ ಸಚಿವರು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಕಳುಹಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಂಜಾಬ್ ಪೊಲೀಸ್‌ನ ಡಿಐಜಿ ಶ್ರೇಣಿಯ ಐಪಿಎಸ್ ಮತ್ತು ಪ್ರಾಂತೀಯ ಪೊಲೀಸ್ ಸೇವಾ ಅಧಿಕಾರಿಗಳು ಸೇರಿದಂತೆ 2,000 ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಮತ್ತು ಅಗತ್ಯವಿದ್ದರೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ರೈತರು ದೆಹಲಿಯತ್ತ ಮೆರವಣಿಗೆ ನಡೆಸಲು ಯತ್ನಿಸಿದ ನಂತರ ಬುಧವಾರ ಶಂಭು ಗಡಿಯಲ್ಲಿ ಮತ್ತೆ ಅಶ್ರುವಾಯು ಪ್ರಯೋಗಿಸಲಾಯಿತು. ಮಣ್ಣು ಅರೆಯುವ ಯಂತ್ರಗಳೊಂದಿಗೆ ಸಾಲುಗಟ್ಟಿ ನಿಂತಿದ್ದ ರೈತರ ವಿರುದ್ಧ ಹರಿಹಾಯ್ದ ಹರ್ಯಾಣ ಪೊಲೀಸರು ರೈತರನ್ನು ಕೆಳಗಿಳಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ಮಾತುಕತೆಗಳನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿರುವ ಅಶಿಸ್ತಿನ ಅಂಶಗಳ’ ವಿರುದ್ಧ ಎಚ್ಚರಿಕೆ ನೀಡಿದ ಕೃಷಿ ಸಚಿವ ಅರ್ಜುನ್ ಮುಂಡಾ, ಐದನೇ ಸುತ್ತಿನ ಚರ್ಚೆಗಾಗಿ ರೈತರನ್ನು ಸಂಧಾನದ ಮೇಜಿಗೆ ಮರಳಿ ಆಹ್ವಾನಿಸಿದ್ದಾರೆ; ಶಾಂತಿಯುತವಾಗಿರಲು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ದೆಹಲಿ ಚಲೋ ರೈತರ ಪ್ರತಿಭಟನೆ: ತಲೆಗೆ ಪೆಟ್ಟು ಬಿದ್ದು ಪ್ರತಿಭಟನಾನಿರತ ಯುವ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...