Homeಮುಖಪುಟಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

- Advertisement -
- Advertisement -

ರೈತರ ಆಂದೋಲನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡಿರುವ ಸಲಹೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸರ್ಕಾರ, ರಾಜ್ಯವು ಗಡಿಯಲ್ಲಿ ಪ್ರತಿಭಟನಾಕಾರರಿಗೆ ಸೇರಲು ಅವಕಾಶ ನೀಡುತ್ತಿದೆ ಎಂದು ಹೇಳುವುದು ಸಂಪೂರ್ಣ ತಪ್ಪು ಎಂದು ಹೇಳಿದೆ.

ಹರಿಯಾಣ ಪೊಲೀಸರ ಅಶ್ರುವಾಯು ಶೆಲ್‌ಗಳು, ರಬ್ಬರ್ ಬುಲೆಟ್‌ಗಳು, ಡ್ರೋನ್‌ಗಳು ಮತ್ತು ದೈಹಿಕ ಬಲದ ಬಳಕೆಯಿಂದಾಗಿ 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೂ, ಪಂಜಾಬ್ ಸರ್ಕಾರವು ‘ಜವಾಬ್ದಾರಿಯಿಂದ’ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡಿದೆ ಎಂದು ಅದು ಹೇಳಿಕೊಂಡಿದೆ.

ಬುಧವಾರದಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವ ಮುನ್ನ 14,000 ಕ್ಕೂ ಹೆಚ್ಚು ಜನರು 1,200 ಟ್ರಾಕ್ಟರ್-ಟ್ರಾಲಿಗಳು ಮತ್ತು ಇತರ ವಾಹನಗಳೊಂದಿಗೆ ಪಂಜಾಬ್-ಹರಿಯಾಣ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ ಎಂಬ ವರದಿಗಳ ನಂತರ, ಗೃಹ ವ್ಯವಹಾರಗಳ ಸಚಿವಾಲಯ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ.

ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಬುಧವಾರ ಬರೆದ ಪತ್ರದಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹಿಂದಿನ ದಿನ ಹೊರಡಿಸಿದ ಆದೇಶಗಳನ್ನು ಸ್ವೀಕರಿಸಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ ರೈತರು ರಸ್ತೆಯ ಮೇಲೆ ಟ್ರ್ಯಾಕ್ಟರ್-ಟ್ರಾಲಿಗಳನ್ನು ಬಳಸದಂತೆ ಕೇಳಿಕೊಂಡಿದೆ.  ನ್ಯಾಯಾಲಯದ ವೆಬ್‌ಸೈಟ್‌ನಲ್ಲಿಯೂ ಆದೇಶವನ್ನು ಅಪ್‌ಲೋಡ್ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ರೈತರು ಪ್ರತಿಭಟಿಸಲು ದೆಹಲಿಗೆ ಹೋಗುತ್ತಿದ್ದಾರೆ ಮತ್ತು ಪಂಜಾಬ್ ಮತ್ತು ಹರಿಯಾಣದ ಗಡಿಯಲ್ಲಿ ಅವರನ್ನು ತಡೆದಿದ್ದರಿಂದ ಅವರನ್ನು ಅಲ್ಲಿಯೆ ನಿಲ್ಲಿಸಲಾಯಿತು ಎಂದು ವರ್ಮಾ ಹೇಳಿದ್ದಾರೆ.

‘ಹರಿಯಾಣ ಪೊಲೀಸರು ಬಳಸಿದ ಅಶ್ರುವಾಯು, ರಬ್ಬರ್ ಬುಲೆಟ್‌ಗಳು, ದೈಹಿಕ ಬಲ ಮತ್ತು ಡ್ರೋನ್‌ಗಳಿಂದ ಇದುವರೆಗೆ 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದರ ನಂತರವೂ ಪಂಜಾಬ್ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದೆ’ ಎಂದು ಪಂಜಾಬ್ ತನ್ನ ಪತ್ರದಲ್ಲಿ ತಿಳಿಸಿದೆ.

ರೈತರ ಬಗ್ಗೆ ಹೆಚ್ಚು ಸಹಾನುಭೂತಿ ತೋರಿಸಲು ಕರೆ ನೀಡಿದ ಮುಖ್ಯ ಕಾರ್ಯದರ್ಶಿ, ಪಂಜಾಬ್ ಗಡಿ ರಾಜ್ಯವಾಗಿರುವುದರಿಂದ ಪ್ರತಿಭಟನೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪಂಜಾಬ್ ಸರ್ಕಾರವು ಮಾತುಕತೆಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಒತ್ತಿ ಹೇಳಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರ ಮತ್ತು ರೈತರ ನಡುವಿನ ನಾಲ್ಕು ಸಭೆಗಳಲ್ಲಿ ಮೂರರಲ್ಲಿ ಭಾಗವಹಿಸಿದ್ದರು.  ಮಾನ್ ಅವರು ಭಾಗವಹಿಸಲು ಸಾಧ್ಯವಾಗದ ಏಕೈಕ ಸಭೆಗೆ ಕ್ಯಾಬಿನೆಟ್ ಸಚಿವರು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಕಳುಹಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಂಜಾಬ್ ಪೊಲೀಸ್‌ನ ಡಿಐಜಿ ಶ್ರೇಣಿಯ ಐಪಿಎಸ್ ಮತ್ತು ಪ್ರಾಂತೀಯ ಪೊಲೀಸ್ ಸೇವಾ ಅಧಿಕಾರಿಗಳು ಸೇರಿದಂತೆ 2,000 ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಮತ್ತು ಅಗತ್ಯವಿದ್ದರೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ರೈತರು ದೆಹಲಿಯತ್ತ ಮೆರವಣಿಗೆ ನಡೆಸಲು ಯತ್ನಿಸಿದ ನಂತರ ಬುಧವಾರ ಶಂಭು ಗಡಿಯಲ್ಲಿ ಮತ್ತೆ ಅಶ್ರುವಾಯು ಪ್ರಯೋಗಿಸಲಾಯಿತು. ಮಣ್ಣು ಅರೆಯುವ ಯಂತ್ರಗಳೊಂದಿಗೆ ಸಾಲುಗಟ್ಟಿ ನಿಂತಿದ್ದ ರೈತರ ವಿರುದ್ಧ ಹರಿಹಾಯ್ದ ಹರ್ಯಾಣ ಪೊಲೀಸರು ರೈತರನ್ನು ಕೆಳಗಿಳಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ಮಾತುಕತೆಗಳನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿರುವ ಅಶಿಸ್ತಿನ ಅಂಶಗಳ’ ವಿರುದ್ಧ ಎಚ್ಚರಿಕೆ ನೀಡಿದ ಕೃಷಿ ಸಚಿವ ಅರ್ಜುನ್ ಮುಂಡಾ, ಐದನೇ ಸುತ್ತಿನ ಚರ್ಚೆಗಾಗಿ ರೈತರನ್ನು ಸಂಧಾನದ ಮೇಜಿಗೆ ಮರಳಿ ಆಹ್ವಾನಿಸಿದ್ದಾರೆ; ಶಾಂತಿಯುತವಾಗಿರಲು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ದೆಹಲಿ ಚಲೋ ರೈತರ ಪ್ರತಿಭಟನೆ: ತಲೆಗೆ ಪೆಟ್ಟು ಬಿದ್ದು ಪ್ರತಿಭಟನಾನಿರತ ಯುವ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...