Homeಮುಖಪುಟಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.”

ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ?

ಭಗತ್ ಸಿಂಗ್…!!

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳಬೇಕಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ಸಿಂಗ್‍ ಮಾತಿನಂತೆ  ಭಗತ್ ಸಿಂಗ್ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ಕಿಡಿಗಳು ಇಂದಿಗೂ ಜೀವಂತವಾಗಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆವಷ್ಟೇ ಮಾಡುವುದಲ್ಲ. ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕು. ಭಗತ್ ಸಿಂಗ್‌ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ. ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು.
ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ.ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ ಭಗತ್ ಸಿಂಗ್ “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದನು.

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ , ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ.

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ.

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಅಂತಿಮವರೆಗೂ ಬದ್ಧನಾಗಿರುವುದು ಇಲ್ಲಿ ಗಮನಿಸಬಹುದು.

ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. “ಸಮಾಜವನ್ನು ನೂತನ ನೆಲೆಯಲ್ಲಿ,. ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದು ಹೇಳಿದ ಭಗತ್ ಸಿಂಗ್ ಚಿಂತನೆಗಳು ಇಲ್ಲವಾಗುತ್ತಿವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ  ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಇಷ್ಟಪಡುತ್ತಿದ್ದನು. ಹಾಗಾಗಿ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದಾದರು. ತನ್ನ ಅಂತಿಮ ಕ್ಷಣಗಳವರೆಗೂ ಓದುವ ಹವ್ಯಾಸ ಮೈಗೂಡಿಸಿಕೊಂಡ ಭಗತ್ ಸಿಂಗ್ ಒಬ್ಬ ಉತ್ತಮ ಓದುಗ, ಬರಹಗಾರ ಕೂಡ ಹೌದು.

‘ಈ ಸಾವು ಸಹ ಬಹಳ ಸುಂದರವಾಗಿರುತ್ತದೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ ‘ ನೋವಿನ ಹೋರಾಟದ ಬದುಕಿನ ಸಂದರ್ಭದಲ್ಲಿ ಸಾವು ಆದರ್ಶಮಯವಾಗಿ ಜೀವಂತಿಕೆ ಪಡೆಯುವುದು ಎಂದು ನುಡಿದ ಭಗತರು ಅಪ್ರತಿಮ ಧೈರ್ಯಶಾಲಿ ಆಗಿದ್ದರು.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಉಳಿದಿದ್ದಾನೆ, ಹೊರತು ಅವನು ಪ್ರತಿಪಾದಿಸಿದ ಸಿದ್ಧಾಂತ ಮಾತ್ರ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ.
ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ ನನ್ನನ್ನು ಗುಂಡಿಕ್ಕಿ ಕೊಲ್ಲಲು ವಿನಂತಿಸಿದ ಭಾರತದ ಏಕೈಕ ದೇಶಪ್ರೇಮಿ ಭಗತ್ ಸಿಂಗ್ ನನ್ನು ‘ಭಾರತ ರತ್ನ’ ನೀಡಲು ಅರ್ಹತೆ ಅಳೆಯುತ್ತಾರೆ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ. ಕಿರಿಯ ವಯಸ್ಸಲ್ಲೇ ಭಾರತದ ಭವಿಷ್ಯಕ್ಕಾಗಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್ ಮಾನವ ‌ಸಮಾಜಕ್ಕೆ ಆದಷ್ಟು ಹೆಚ್ಚಿನ ಸೇವೆ ಮಾಡಲು ಬಯಸಿದನು. ಭಗತ್ ಸಿಂಗ್ ಧೋರಣೆಯನ್ನು ನಮ್ಮೆಲ್ಲರ ಮನಸ್ಸಿನ ಮೇಲೆ ಅಚ್ಚಳಿಯದೆ ಪ್ರಭಾವ ಬೀರಿವೆ. ಇನ್ನೂ ನಾವು ಬಯಸಿದ ಭವಿಷ್ಯ ಭಾರತಕ್ಕೆ ಭಗತ್ ಸಿಂಗ್ ಆದರ್ಶ, ಚಿಂತನೆಗಳು ಮುನ್ನೆಲೆಗೆ ತರಲು ಪ್ರಯತ್ನಿಸೋಣ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿ ನಮ್ಮದಾಗಿಸೋಣ.‌

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....