Homeಮುಖಪುಟಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.”

ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ?

ಭಗತ್ ಸಿಂಗ್…!!

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳಬೇಕಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ಸಿಂಗ್‍ ಮಾತಿನಂತೆ  ಭಗತ್ ಸಿಂಗ್ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ಕಿಡಿಗಳು ಇಂದಿಗೂ ಜೀವಂತವಾಗಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆವಷ್ಟೇ ಮಾಡುವುದಲ್ಲ. ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕು. ಭಗತ್ ಸಿಂಗ್‌ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ. ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು.
ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ.ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ ಭಗತ್ ಸಿಂಗ್ “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದನು.

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ , ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ.

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ.

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಅಂತಿಮವರೆಗೂ ಬದ್ಧನಾಗಿರುವುದು ಇಲ್ಲಿ ಗಮನಿಸಬಹುದು.

ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. “ಸಮಾಜವನ್ನು ನೂತನ ನೆಲೆಯಲ್ಲಿ,. ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದು ಹೇಳಿದ ಭಗತ್ ಸಿಂಗ್ ಚಿಂತನೆಗಳು ಇಲ್ಲವಾಗುತ್ತಿವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ  ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಇಷ್ಟಪಡುತ್ತಿದ್ದನು. ಹಾಗಾಗಿ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದಾದರು. ತನ್ನ ಅಂತಿಮ ಕ್ಷಣಗಳವರೆಗೂ ಓದುವ ಹವ್ಯಾಸ ಮೈಗೂಡಿಸಿಕೊಂಡ ಭಗತ್ ಸಿಂಗ್ ಒಬ್ಬ ಉತ್ತಮ ಓದುಗ, ಬರಹಗಾರ ಕೂಡ ಹೌದು.

‘ಈ ಸಾವು ಸಹ ಬಹಳ ಸುಂದರವಾಗಿರುತ್ತದೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ ‘ ನೋವಿನ ಹೋರಾಟದ ಬದುಕಿನ ಸಂದರ್ಭದಲ್ಲಿ ಸಾವು ಆದರ್ಶಮಯವಾಗಿ ಜೀವಂತಿಕೆ ಪಡೆಯುವುದು ಎಂದು ನುಡಿದ ಭಗತರು ಅಪ್ರತಿಮ ಧೈರ್ಯಶಾಲಿ ಆಗಿದ್ದರು.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಉಳಿದಿದ್ದಾನೆ, ಹೊರತು ಅವನು ಪ್ರತಿಪಾದಿಸಿದ ಸಿದ್ಧಾಂತ ಮಾತ್ರ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ.
ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ ನನ್ನನ್ನು ಗುಂಡಿಕ್ಕಿ ಕೊಲ್ಲಲು ವಿನಂತಿಸಿದ ಭಾರತದ ಏಕೈಕ ದೇಶಪ್ರೇಮಿ ಭಗತ್ ಸಿಂಗ್ ನನ್ನು ‘ಭಾರತ ರತ್ನ’ ನೀಡಲು ಅರ್ಹತೆ ಅಳೆಯುತ್ತಾರೆ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ. ಕಿರಿಯ ವಯಸ್ಸಲ್ಲೇ ಭಾರತದ ಭವಿಷ್ಯಕ್ಕಾಗಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್ ಮಾನವ ‌ಸಮಾಜಕ್ಕೆ ಆದಷ್ಟು ಹೆಚ್ಚಿನ ಸೇವೆ ಮಾಡಲು ಬಯಸಿದನು. ಭಗತ್ ಸಿಂಗ್ ಧೋರಣೆಯನ್ನು ನಮ್ಮೆಲ್ಲರ ಮನಸ್ಸಿನ ಮೇಲೆ ಅಚ್ಚಳಿಯದೆ ಪ್ರಭಾವ ಬೀರಿವೆ. ಇನ್ನೂ ನಾವು ಬಯಸಿದ ಭವಿಷ್ಯ ಭಾರತಕ್ಕೆ ಭಗತ್ ಸಿಂಗ್ ಆದರ್ಶ, ಚಿಂತನೆಗಳು ಮುನ್ನೆಲೆಗೆ ತರಲು ಪ್ರಯತ್ನಿಸೋಣ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿ ನಮ್ಮದಾಗಿಸೋಣ.‌

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...