Homeಮುಖಪುಟಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.”

ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ?

ಭಗತ್ ಸಿಂಗ್…!!

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳಬೇಕಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ಸಿಂಗ್‍ ಮಾತಿನಂತೆ  ಭಗತ್ ಸಿಂಗ್ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ಕಿಡಿಗಳು ಇಂದಿಗೂ ಜೀವಂತವಾಗಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆವಷ್ಟೇ ಮಾಡುವುದಲ್ಲ. ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕು. ಭಗತ್ ಸಿಂಗ್‌ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ. ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು.
ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ.ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ ಭಗತ್ ಸಿಂಗ್ “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದನು.

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ , ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ.

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ.

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಅಂತಿಮವರೆಗೂ ಬದ್ಧನಾಗಿರುವುದು ಇಲ್ಲಿ ಗಮನಿಸಬಹುದು.

ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. “ಸಮಾಜವನ್ನು ನೂತನ ನೆಲೆಯಲ್ಲಿ,. ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದು ಹೇಳಿದ ಭಗತ್ ಸಿಂಗ್ ಚಿಂತನೆಗಳು ಇಲ್ಲವಾಗುತ್ತಿವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ  ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಇಷ್ಟಪಡುತ್ತಿದ್ದನು. ಹಾಗಾಗಿ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದಾದರು. ತನ್ನ ಅಂತಿಮ ಕ್ಷಣಗಳವರೆಗೂ ಓದುವ ಹವ್ಯಾಸ ಮೈಗೂಡಿಸಿಕೊಂಡ ಭಗತ್ ಸಿಂಗ್ ಒಬ್ಬ ಉತ್ತಮ ಓದುಗ, ಬರಹಗಾರ ಕೂಡ ಹೌದು.

‘ಈ ಸಾವು ಸಹ ಬಹಳ ಸುಂದರವಾಗಿರುತ್ತದೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ ‘ ನೋವಿನ ಹೋರಾಟದ ಬದುಕಿನ ಸಂದರ್ಭದಲ್ಲಿ ಸಾವು ಆದರ್ಶಮಯವಾಗಿ ಜೀವಂತಿಕೆ ಪಡೆಯುವುದು ಎಂದು ನುಡಿದ ಭಗತರು ಅಪ್ರತಿಮ ಧೈರ್ಯಶಾಲಿ ಆಗಿದ್ದರು.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಉಳಿದಿದ್ದಾನೆ, ಹೊರತು ಅವನು ಪ್ರತಿಪಾದಿಸಿದ ಸಿದ್ಧಾಂತ ಮಾತ್ರ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ.
ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ ನನ್ನನ್ನು ಗುಂಡಿಕ್ಕಿ ಕೊಲ್ಲಲು ವಿನಂತಿಸಿದ ಭಾರತದ ಏಕೈಕ ದೇಶಪ್ರೇಮಿ ಭಗತ್ ಸಿಂಗ್ ನನ್ನು ‘ಭಾರತ ರತ್ನ’ ನೀಡಲು ಅರ್ಹತೆ ಅಳೆಯುತ್ತಾರೆ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ. ಕಿರಿಯ ವಯಸ್ಸಲ್ಲೇ ಭಾರತದ ಭವಿಷ್ಯಕ್ಕಾಗಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್ ಮಾನವ ‌ಸಮಾಜಕ್ಕೆ ಆದಷ್ಟು ಹೆಚ್ಚಿನ ಸೇವೆ ಮಾಡಲು ಬಯಸಿದನು. ಭಗತ್ ಸಿಂಗ್ ಧೋರಣೆಯನ್ನು ನಮ್ಮೆಲ್ಲರ ಮನಸ್ಸಿನ ಮೇಲೆ ಅಚ್ಚಳಿಯದೆ ಪ್ರಭಾವ ಬೀರಿವೆ. ಇನ್ನೂ ನಾವು ಬಯಸಿದ ಭವಿಷ್ಯ ಭಾರತಕ್ಕೆ ಭಗತ್ ಸಿಂಗ್ ಆದರ್ಶ, ಚಿಂತನೆಗಳು ಮುನ್ನೆಲೆಗೆ ತರಲು ಪ್ರಯತ್ನಿಸೋಣ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿ ನಮ್ಮದಾಗಿಸೋಣ.‌

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...