Homeಮುಖಪುಟಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

- Advertisement -
- Advertisement -

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಚಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.”

ಇಂತಹ ಕೋರಿಕೆಯ ಮಾತುಗಳು ಬ್ರಿಟೀಷ್ ಸರ್ಕಾರಕ್ಕೆ ಮನವಿ ಪತ್ರದ ಮೂಲಕ ಹೇಳಿರುವ ಕ್ರಾಂತಿಕಾರಿ ವೀರ ಯಾರು ಗೊತ್ತಾ?

ಭಗತ್ ಸಿಂಗ್…!!

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳಬೇಕಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ಸಿಂಗ್‍ ಮಾತಿನಂತೆ  ಭಗತ್ ಸಿಂಗ್ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ಕಿಡಿಗಳು ಇಂದಿಗೂ ಜೀವಂತವಾಗಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆವಷ್ಟೇ ಮಾಡುವುದಲ್ಲ. ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕು. ಭಗತ್ ಸಿಂಗ್‌ನ ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ. ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲ್ ಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು.
ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು. ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತದ ದಾರ್ಶನಿಕತೆಗಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ.

ಭಾರತದ ಸ್ವಾತಂತ್ರ್ಯ ಚಳುವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ.ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ ಭಗತ್ ಸಿಂಗ್ “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದನು.

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ , ಹಾಗೂ ಪವಿತ್ರವಾದದ್ದು ಎಂದು ತಿಳಿದಿದನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ ಆದರೆ ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ.

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ.

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಅಂತಿಮವರೆಗೂ ಬದ್ಧನಾಗಿರುವುದು ಇಲ್ಲಿ ಗಮನಿಸಬಹುದು.

ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. “ಸಮಾಜವನ್ನು ನೂತನ ನೆಲೆಯಲ್ಲಿ,. ಹೆಚ್ಚು ಸಮರ್ಥವಾದ ನೆಲೆಯಲ್ಲಿ, ಪ್ರಸಕ್ತ ಆಡಳಿತ ವ್ಯವಸ್ಥೆ ಮತ್ತು ಪ್ರಭುತ್ವವನ್ನು ಕೊನೆಗೊಳಿಸಿ ವ್ಯವಸ್ಥಿತವಾಗಿ ನವ ಸಮಾಜವನ್ನು ನಿರ್ಮಿಸುವುದು ಕ್ರಾಂತಿಯ ಸ್ವರೂಪ” ಎಂದು ಹೇಳಿದ ಭಗತ್ ಸಿಂಗ್ ಚಿಂತನೆಗಳು ಇಲ್ಲವಾಗುತ್ತಿವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ.

ಸಾಮಾಜಿಕ ವಿಚಾರಗಳನ್ನು ಸೇರಿದಂತೆ ಇನ್ನಿತರ ಮಹನೀಯರು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅನುಭವಾತ್ಮಕವಾಗಿ  ಅರ್ಥೈಸಿಕೊಳ್ಳಲು ಭಗತ್ ಸಿಂಗ್ ಇಷ್ಟಪಡುತ್ತಿದ್ದನು. ಹಾಗಾಗಿ “ಎಲ್ಲ ವಿಚಾರಗಳ ಅಧ್ಯಯನ ನಡೆಸಲು ಸೆರೆಮನೆಯೇ ಸೂಕ್ತ ತಾಣ ಎಂದು ನನಗೆ ಭಾಸವಾಗುತ್ತದೆ. ಯಾವುದೇ ವ್ಯಕ್ತಿ ಸ್ವತಃ ನೋವು ಅನುಭವಿಸಿದಲ್ಲಿ ಮಾತ್ರ‌ ಸ್ವಯಂ ಅಧ್ಯಯನ ಅತ್ಯುನ್ನತ ಹಂತ ಕಾಣಲು ಸಾಧ್ಯ” ಎಂದಾದರು. ತನ್ನ ಅಂತಿಮ ಕ್ಷಣಗಳವರೆಗೂ ಓದುವ ಹವ್ಯಾಸ ಮೈಗೂಡಿಸಿಕೊಂಡ ಭಗತ್ ಸಿಂಗ್ ಒಬ್ಬ ಉತ್ತಮ ಓದುಗ, ಬರಹಗಾರ ಕೂಡ ಹೌದು.

‘ಈ ಸಾವು ಸಹ ಬಹಳ ಸುಂದರವಾಗಿರುತ್ತದೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ ‘ ನೋವಿನ ಹೋರಾಟದ ಬದುಕಿನ ಸಂದರ್ಭದಲ್ಲಿ ಸಾವು ಆದರ್ಶಮಯವಾಗಿ ಜೀವಂತಿಕೆ ಪಡೆಯುವುದು ಎಂದು ನುಡಿದ ಭಗತರು ಅಪ್ರತಿಮ ಧೈರ್ಯಶಾಲಿ ಆಗಿದ್ದರು.

ಸಮಕಾಲೀನ ಭಾರತದಲ್ಲಿ ಭಗತ್ ಸಿಂಗ್ ಕೇವಲ ಆರಾಧನೆಗಾಗಿ ಉಳಿದಿದ್ದಾನೆ, ಹೊರತು ಅವನು ಪ್ರತಿಪಾದಿಸಿದ ಸಿದ್ಧಾಂತ ಮಾತ್ರ ಉಸಿರಾಡಲು ನಲುಗುತ್ತಿದೆ. ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ಒದ್ದಾಡುತ್ತಿವೆ.
ನಾನು ಈ ನೆಲದ ಅಸ್ಮಿತೆಯ ಉಳಿವಿಗಾಗಿ ಹೋರಾಡಿದ ನನ್ನನ್ನು ಗುಂಡಿಕ್ಕಿ ಕೊಲ್ಲಲು ವಿನಂತಿಸಿದ ಭಾರತದ ಏಕೈಕ ದೇಶಪ್ರೇಮಿ ಭಗತ್ ಸಿಂಗ್ ನನ್ನು ‘ಭಾರತ ರತ್ನ’ ನೀಡಲು ಅರ್ಹತೆ ಅಳೆಯುತ್ತಾರೆ.

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ. ಕಿರಿಯ ವಯಸ್ಸಲ್ಲೇ ಭಾರತದ ಭವಿಷ್ಯಕ್ಕಾಗಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್ ಮಾನವ ‌ಸಮಾಜಕ್ಕೆ ಆದಷ್ಟು ಹೆಚ್ಚಿನ ಸೇವೆ ಮಾಡಲು ಬಯಸಿದನು. ಭಗತ್ ಸಿಂಗ್ ಧೋರಣೆಯನ್ನು ನಮ್ಮೆಲ್ಲರ ಮನಸ್ಸಿನ ಮೇಲೆ ಅಚ್ಚಳಿಯದೆ ಪ್ರಭಾವ ಬೀರಿವೆ. ಇನ್ನೂ ನಾವು ಬಯಸಿದ ಭವಿಷ್ಯ ಭಾರತಕ್ಕೆ ಭಗತ್ ಸಿಂಗ್ ಆದರ್ಶ, ಚಿಂತನೆಗಳು ಮುನ್ನೆಲೆಗೆ ತರಲು ಪ್ರಯತ್ನಿಸೋಣ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿ ನಮ್ಮದಾಗಿಸೋಣ.‌

ಇಂದು ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಹುತಾತ್ಮ ದಿನ. ಈ ಮೂವರ ಅದಮ್ಯ ಚೇತನಕ್ಕೆ ನಾವು ಗೌರವಿಸಿ , ಆದರ್ಶವಾಗಿ ಸ್ವೀಕರಿಸೋಣ. ಈ ಮಹಾತ್ಮರು ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...