Homeಕರೋನಾ ತಲ್ಲಣಮತ್ತೆ ಶುರುವಾಯಿತು ವಲಸೆ: ಊರುಗಳಿಗೆ ತೆರಳಲು ಮುಂಬೈ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಜನ

ಮತ್ತೆ ಶುರುವಾಯಿತು ವಲಸೆ: ಊರುಗಳಿಗೆ ತೆರಳಲು ಮುಂಬೈ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಜನ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸಂಚಾರ, ದಿನನಿತ್ಯದ ವಹಿವಾಟುಗಳಿಗೆ ತೀವ್ರ ನಿರ್ಬಂಧಗಳನ್ನು ಘೋಷಿಸಿದ ನಂತರ ಬುಧವಾರ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಹೊರಗೆ ರೈಲುಗಳನ್ನು ಹತ್ತಲು ಸಾವಿರಾರು ಪ್ರಯಾಣಿಕರು ಜಮಾಯಿಸಿದ್ದರು.

ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಬಳಿ ಜನಸಂದಣಿಯನ್ನು ನಿಯಂತ್ರಿಸಲು ರೈಲ್ವೆ ಸಂರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಹೊರಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ರೈಲ್ವೆ ಇಲಾಖೆಯು ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿ ನಿರ್ಮಿಸಿಬಾರದು ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಏಪ್ರಿಲ್ 14 ರ ರಾತ್ರಿ 8 ರಿಂದ 15 ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಜಾರಿ ಮಾಡಲಾಗುತ್ತಿದೆ.

ಕೊರೊನಾ ಎರಡನೇ ಅಲೆಯಲ್ಲಿ ರಾಜ್ಯ ನಲುಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಮುಂದಿನ 15 ದಿನಗಳಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಓಡಾಟಕ್ಕೆ ತೀವ್ರ ನಿರ್ಬಂಧಗಳನ್ನು ಘೋಷಿಸಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿದ್ದು, ಮೇ 1 ರಂದು ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಂಗಳವಾರ, ರಾಜ್ಯ ಸರ್ಕಾರವು ಹೊಸ ನಿರ್ಬಂಧಗಳನ್ನು ಘೋಷಿಸುವ ಮೊದಲು ಕೂಡ ಲೋಕಮಾನ್ಯ ತಿಲಕ್ ಟರ್ಮಿನಲ್ ಹೊರಗೆ ಹೆಚ್ಚಿನ ಸಂಖ್ಯೆಯ ಜನರು, ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು ಜಮಾಯಿಸಿದ್ದರು.
ಕೇಂದ್ರ ರೈಲ್ವೆಯ ಮುಖ್ಯ ಜನಸಂಪರ್ಕ ಅಧಿಕಾರಿ ಶಿವಾಜಿ ಸುತಾರ್, “ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿಯನ್ನು ಉಂಟು ಮಾಡಬಾರದು” ಎಂದು ಮನವಿ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದೆ.

“ಟಿಕೆಟ್‌ಗಳನ್ನು ದೃಢಪಡಿಸಿದ ಪ್ರಯಾಣಿಕರಿಗೆ ಮಾತ್ರ ವಿಶೇಷ ರೈಲುಗಳನ್ನು ಹತ್ತಲು ಅನುಮತಿ ಇದೆ ಮತ್ತು ರೈಲು ಹೊರಡುವ ಸಮಯಕ್ಕೆ ಒಂದೂವರೆ ಗಂಟೆಗಳ ಮೊದಲು ಅವರು ನಿಲ್ದಾಣಗಳನ್ನು ತಲುಪಬೇಕು” ಎಂದು  ಹೇಳಿದ್ದಾರೆ.

ಕೇಂದ್ರ ರೈಲ್ವೆ ರೈಲುಗಳ ರಿಸರ್ವೆಷನ್ ಪಟ್ಟಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಯಾವುದೇ ನಿರ್ದಿಷ್ಟ ತಾಣಕ್ಕೆ ಹೆಚ್ಚಿನ ಟಿಕೆಟ್ ಬೇಡಿಕೆ ಇದೆಯೇ ಎಂದು ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...