Homeಕರೋನಾ ತಲ್ಲಣಮತ್ತೆ ಶುರುವಾಯಿತು ವಲಸೆ: ಊರುಗಳಿಗೆ ತೆರಳಲು ಮುಂಬೈ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಜನ

ಮತ್ತೆ ಶುರುವಾಯಿತು ವಲಸೆ: ಊರುಗಳಿಗೆ ತೆರಳಲು ಮುಂಬೈ ರೈಲು ನಿಲ್ದಾಣದಲ್ಲಿ ಜಮಾಯಿಸಿದ ಸಾವಿರಾರು ಜನ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸಂಚಾರ, ದಿನನಿತ್ಯದ ವಹಿವಾಟುಗಳಿಗೆ ತೀವ್ರ ನಿರ್ಬಂಧಗಳನ್ನು ಘೋಷಿಸಿದ ನಂತರ ಬುಧವಾರ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಹೊರಗೆ ರೈಲುಗಳನ್ನು ಹತ್ತಲು ಸಾವಿರಾರು ಪ್ರಯಾಣಿಕರು ಜಮಾಯಿಸಿದ್ದರು.

ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಬಳಿ ಜನಸಂದಣಿಯನ್ನು ನಿಯಂತ್ರಿಸಲು ರೈಲ್ವೆ ಸಂರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಹೊರಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ರೈಲ್ವೆ ಇಲಾಖೆಯು ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿ ನಿರ್ಮಿಸಿಬಾರದು ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಏಪ್ರಿಲ್ 14 ರ ರಾತ್ರಿ 8 ರಿಂದ 15 ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಜಾರಿ ಮಾಡಲಾಗುತ್ತಿದೆ.

ಕೊರೊನಾ ಎರಡನೇ ಅಲೆಯಲ್ಲಿ ರಾಜ್ಯ ನಲುಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಮುಂದಿನ 15 ದಿನಗಳಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಓಡಾಟಕ್ಕೆ ತೀವ್ರ ನಿರ್ಬಂಧಗಳನ್ನು ಘೋಷಿಸಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿದ್ದು, ಮೇ 1 ರಂದು ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಂಗಳವಾರ, ರಾಜ್ಯ ಸರ್ಕಾರವು ಹೊಸ ನಿರ್ಬಂಧಗಳನ್ನು ಘೋಷಿಸುವ ಮೊದಲು ಕೂಡ ಲೋಕಮಾನ್ಯ ತಿಲಕ್ ಟರ್ಮಿನಲ್ ಹೊರಗೆ ಹೆಚ್ಚಿನ ಸಂಖ್ಯೆಯ ಜನರು, ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು ಜಮಾಯಿಸಿದ್ದರು.
ಕೇಂದ್ರ ರೈಲ್ವೆಯ ಮುಖ್ಯ ಜನಸಂಪರ್ಕ ಅಧಿಕಾರಿ ಶಿವಾಜಿ ಸುತಾರ್, “ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿಯನ್ನು ಉಂಟು ಮಾಡಬಾರದು” ಎಂದು ಮನವಿ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದೆ.

“ಟಿಕೆಟ್‌ಗಳನ್ನು ದೃಢಪಡಿಸಿದ ಪ್ರಯಾಣಿಕರಿಗೆ ಮಾತ್ರ ವಿಶೇಷ ರೈಲುಗಳನ್ನು ಹತ್ತಲು ಅನುಮತಿ ಇದೆ ಮತ್ತು ರೈಲು ಹೊರಡುವ ಸಮಯಕ್ಕೆ ಒಂದೂವರೆ ಗಂಟೆಗಳ ಮೊದಲು ಅವರು ನಿಲ್ದಾಣಗಳನ್ನು ತಲುಪಬೇಕು” ಎಂದು  ಹೇಳಿದ್ದಾರೆ.

ಕೇಂದ್ರ ರೈಲ್ವೆ ರೈಲುಗಳ ರಿಸರ್ವೆಷನ್ ಪಟ್ಟಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಯಾವುದೇ ನಿರ್ದಿಷ್ಟ ತಾಣಕ್ಕೆ ಹೆಚ್ಚಿನ ಟಿಕೆಟ್ ಬೇಡಿಕೆ ಇದೆಯೇ ಎಂದು ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...