Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...