Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...