Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....