Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...