Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...