Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...