Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...