Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...