Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...